ಚಿತ್ರದುರ್ಗ | ಕವಾಡಿಗರ ಹಟ್ಟಿಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

Date:

Advertisements

ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇಡೀ ಗ್ರಾಮವೇ ಆತಂಕದಲ್ಲಿ ದಿನಗಳನ್ನು ದೂಡಿದೆ. ಇದೀಗ, ಆರೋಗ್ಯ ಇಲಾಖೆಯು ಗ್ರಾಮದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದು, ‘ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ’ ಎಂಬಂತೆ ಇಲಾಖೆ ಕೆಲಸ ಮಾಡುತ್ತಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಚಿತ್ರದುರ್ಗ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳ ಕುರಿತು ಕವಾಡಿಗರ ಹಟ್ಟಿಯಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಕಾರ್ಯಕ್ರಮ ನಡೆಸಿದೆ. “ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವುದರಿಂದ, ವಾಂತಿಭೇದಿ ಪ್ರಕರಣಗಳು ಹರಡದಂತೆ ತಡೆಗಟ್ಟಬಹುದು. ಊಟ ಮಾಡುವ ಮುನ್ನ, ಶೌಚಾಲಯ ಬಳಕೆ ಮಾಡಿದ ನಂತರ, ಸೋಪಿನಿಂದ ಕೈ-ಕಾಲುಗಳನ್ನು ತೊಳೆದುಕೊಳ್ಳಬೇಕು. ಬಿಸಿ ಬಿಸಿ ಆಹಾರ ಪದಾರ್ಥಗಳನ್ನು ಮಾತ್ರ ಸೇವನೆ ಮಾಡಬೇಕು. ತಂಗಳು
ತಡಿಗಳನ್ನ ತಿನ್ನಬಾರದು. ಹಣ್ಣು ತರಕಾರಿಗಳನ್ನ ಉಪ್ಪು ನೀರಿನಿಂದ ತೊಳೆದು ಉಪಯೋಗಿಸಬೇಕು. ಆಹಾರ ಪದಾರ್ಥಗಳ ಮೇಲೆ ನೊಣಗಳು ಕೂರದಂತೆ ಮುಚ್ಚಿಟ್ಟು ಬಳಸಬೇಕು. ಕುದಿಸಿ ಆರಿಸಿದ ನೀರನ್ನು ಮಾತ್ರ ಕುಡಿಯಬೇಕು” ಎಂದು ಜಾಗೃತಿ ಮೂಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X