ಚಿತ್ರದುರ್ಗ | ಅಕ್ರಮವಾಗಿ ಮಣ್ಣು ತೆರವು; ಸೂಕ್ತ ಕ್ರಮಕ್ಕೆ ತಹಶೀಲ್ದಾರ್‌ ಭರವಸೆ

Date:

Advertisements

ನಿಮ್ಮ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ರೈತರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಗೋಮಾಳದಲ್ಲಿ ಹಾಗೂ ದಲಿತರ ಸಾಗುವಳಿ ಜಮೀನುಗಳಲ್ಲಿ ಫಲವತ್ತಾದ ಮಣ್ಣನ್ನು ತೆಗೆಯುವ ಅಕ್ರಮ ದಂಧೆಕೋರರನ್ನು ಮಟ್ಟಹಾಕಿ ಅವರ ಮೇಲೆ ಕೇಸ್ ದಾಖಲಿಸಬೇಕು ಎಂದು ಬಿಡಿಎಎಸ್‌ಎಸ್ ರಾಜ್ಯಾಧ್ಯಕ್ಷ ಡಾ. ಪ್ರಕಾಶ್ ಬಿರಾವರ್ ಆಗ್ರಹಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಹಶೀಲ್ದಾ‌ರ್ ರಾಜೇಶ್ ಕುಮಾರ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನಂತರ ತಾಲೂಕು ಕಚೇರಿಗೆ ಪ್ರತಿಭಟನಾಕಾರರು ಹಾಗೂ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರಕಾಶ್ ಬಿರಾವರವರನ್ನು ಕರೆಸಿ ರೈತರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ ನಂತರ ಪ್ರತಿಭಟನೆ ಹಿಂಪಡೆದು ಮಾತನಾಡಿದರು.

“ಅಕ್ರಮವಾಗಿ ಮಣ್ಣು ತೆರವುಗೊಳಿಸುವುದನ್ನು ತಡೆದು, ಅಕ್ರಮ ಸಾಗಣೆ ನಿಲ್ಲಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವುದರ ಮುಖಾಂತರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಷ್ಟ್ರೀಯ ಅಯುರ್ವೇದ ದಿನಾಚರಣೆ

ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ದಲಿತಪರ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ವಧರ್ಮದ ಶಾಂತಿಯ ಪೀಠ ಶ್ರೀರಾಂಮೂರ್ತಿ ಸ್ವಾಮೀಜಿ ಹಾಗೂ ರಾಜ್ಯ ಕಾರ್ಯಧ್ಯಕ್ಷ ಕೆ ತಿಮ್ಮರಾಜ, ಪರಿವರ್ತನಾವಾದ ಜಿಲ್ಲಾಧ್ಯಕ್ಷ ಹೆಗ್ಗೆರೆ ಮಂಜುನಾಥ್, ಭರಂಪುರ ಕಣುಮಪ್ಪ, ತಾಲೂಕು ಅಧ್ಯಕ್ಷ ಚಂದ್ರಣ್ಣ ಘಾಟ್, ಬಿಡಿಎಸ್‌ಎಸ್‌ ತಾಲೂಕು ಅಧ್ಯಕ್ಷ ಮಂಜುನಾಥ್, ಸಿದ್ದಾರ್ಥ್, ಭರಮಪುರ ಗ್ರಾಮ ಪಂಚಾಯತಿ ಸದಸ್ಯ ರಂಗಸ್ವಾಮಿ, ಮಂಜುನಾಥ್, ನಾಗಮ್ಮ, ಗೌರಮ್ಮ ಗಂಗಮ್ಮ, ಮಮತಾ, ಬೋವಿ ಹನುಮಂತ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X