ಚಿತ್ರದುರ್ಗ | ಅಂತರ್‌ ಜಿಲ್ಲಾ ಕುರಿಗಳ್ಳರ ಸೆರೆ; ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆಗೆ ಮೆಚ್ಚುಗೆ

Date:

Advertisements

ಕುರಿಗಳನ್ನು ಕಳುವು ಮಾಡಿಕೊಂಡು ಪರಾರಿಯಾಗಿದ್ದ ಕುರಿಗಳ್ಳರನ್ನು ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಎಂಬುವವರು ವಾಹನ ಸಮೇತವಾಗಿ ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ರಾಮಸಾಗರ ಗ್ರಾಮದ ಸಣ್ಣ ಗಂಗಪ್ಪನವರು ಸೆಪ್ಟೆಂಬರ್‌ 25ರಂದು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಅನ್ವಯ ಚಿತ್ರದುರ್ಗ ಜಿಲ್ಲೆಯ ಪೋಲಿಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕುಮಾರಸ್ವಾಮಿ, ಪೊಲೀಸ್ ಉಪಾಧೀಕ್ಷಕ ಟಿ ಬಿ ರಾಜಣ್ಣ ಹಾಗೂ ಮೊಳಕಾಲ್ಮೂರು ವೃತ ನಿರೀಕ್ಷಕ ವಸಂತ ವಿ ಅಸೋದೆ ಅವರ ಮಾರ್ಗದರ್ಶನದಲ್ಲಿ ಶೀಘ್ರವಾಗಿ ಕಳ್ಳತನ ಪ್ರಕರಣವನ್ನು ಪತ್ತೆ ಮಾಡಲು ರಾಂಪುರ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ, ಎಎಸ್‌ಐ ಎಸ್ ಲೋಕೇಶ್, ಹೆಚ್ ಸಿ ಇಮಾಮ್ ಹುಸೇನ್-1317, ಶಶಿಕುಮಾರ್ ಪಿಸಿ-2320, ಕುಬೇರ್ ಪಿಸಿ-2638, ದಾವಲ ಮಾಲಿಕ್ ಪಿಸಿ-2252, ತಿಮ್ಮಾರೆಡ್ಡಿ ಪಿಸಿ-2712 ಸೇರಿದಂತೆ ಒಟ್ಟು 7 ಜನರನ್ನು ಒಳಗೊಂಡ ತಂಡವನ್ನು ರಚಿಸಿದ್ದರು.

ರಾಂಪುರ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಅವರು ರೌಂಡ್ಸ್‌ಗೆಂದು ತೆರಳಿದಾಗ ಸದರಿ ತಂಡದವರು ಭಾತ್ಮಿದಾರರ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದ ದೇವಸಮುದ್ರ ಕ್ರಾಸ್ ಬಳಿ ಓಮಿನಿ ವಾಹನದಲ್ಲಿ12 ಕುರಿಗಳ ಸಾಗಾಣಿಕೆ ಕಂಡು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆರೋಪದ ಕೃತ್ಯ ಬಯಲಾಗಿದೆ. ಈ ವೇಳೆ ದಾವಣಗೆರೆ ಮೂಲದ ಮೂರು ಆರೋಪಿಗಳು ಸ್ವತಃ ತಾವೇ ಕುರಿಗಳನ್ನು ಕದ್ದಿರುವುದು ಎಂದು ಒಪ್ಪಿಕೊಂಡಿದ್ದಾರೆ.

Advertisements

ಸಣ್ಣಗಂಗಪ್ಪ ಅವರ ಬಾಬ್ತು ಅಂದಾಜು ₹ 80,000 ಬೆಲೆ ಬಾಳುವ 12 ಕುರಿಗಳನ್ನು ಕಳ್ಳತನ ಮಾಡಿಕೊಂಡು ಕೆಎ-22 Z-5173 ನಂಬರ್‌ನ ಓಮಿನಿ ವಾಹನದಲ್ಲಿ ಕುರಿಗಳನ್ನು ಸಾಗಿಸುತ್ತಿದ್ದುದ್ದನ್ನು ಕಂಡು ರಾಂಪುರ ಠಾಣೆಯ ಮೊಕದ್ದಮೆ ನಂಬರ್ 118/2024 ಕಲಂ:303(2)BNS -2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಮಲಾಪುರ | ಬೌದ್ಧರ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ನೀಡಲು ಒತ್ತಾಯಿಸಿ ಮನವಿ

ರಾಂಪುರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಇವರ ಕಾರ್ಯ ವೈಖರಿಗೆ ರಾಂಪುರ ಸುತ್ತಮುತ್ತಲಿನ ಗ್ರಾಮಸ್ಥರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದು, “ಈ ಪಿಎಸ್‌ಐ ಬಂದಾಗಿನಿಂದ ರಾಂಪುರ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶಾಂತಿ ಸೌಹಾರ್ದತೆ ಹೆಚ್ಚಾಗುತ್ತಿದೆ” ಎಂದು ತಿಳಿಸಿದರು.

ವರದಿ: ಸಿದ್ದೇಶ ಜಿ ವೆಂಕಟಪುರ ಮೊಳಕಾಲ್ಮೂರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X