ಚಿತ್ರದುರ್ಗ | ʼನಟ ದರ್ಶನ್, ರೇಣುಕಸ್ವಾಮಿ ಕುಟುಂಬಕ್ಕೆ ದುಡ್ಡು ಕೊಟ್ಟಿದ್ದಾರೆ‌ʼ; ವದಂತಿಗೆ ಸ್ಪಷ್ಟನೆ

Date:

Advertisements

ನಟ ದರ್ಶನ್ ಅವರು ರೇಣುಕಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿ ದುಡ್ಡು ಕೊಟ್ಟಿದ್ದು, ಅದರಲ್ಲಿ ಅವರು ಕಾರು ಬುಕ್ ಮಾಡಿದ್ದಾರೆ ಎಂಬ ಅನೇಕ ವದಂತಿಗೆ ಸಂಬಂಧಿಸಿದಂತೆ ರೇಣುಕಸ್ವಾಮಿ ತಂದೆ ಮತ್ತು ಕುಟುಂಬದವರು ಹೇಳಿಕೆ ನೀಡಿದ್ದು, ನಾವು ದರ್ಶನ್‌ನನ್ನು ಭೇಟಿ ಮಾಡಿಲ್ಲ, ಅವರೂ ನಮ್ಮನ್ನು ಭೇಟಿ ಮಾಡಿಲ್ಲ. ಅವರಿಂದ ಹತ್ತು ಪೈಸೆಯನ್ನೂ ಪಡೆದುಕೊಂಡಿಲ್ಲ. ಯಾರೋ ಕಿಡಿಗೇಡಿಗಳು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ರಾಜ್ಯದ ಜನ ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರೇಣುಕಸ್ವಾಮಿ ತಂದೆ ಮತ್ತು ಕುಟುಂಬದವರು ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗದ ವಿಆರ್‌ಎಸ್ ಬಡಾವಣೆಯ ತಮ್ಮ ಮನೆಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೆಲ ದಿನಗಳಿಂದ ಫೇಸ್‍ಬುಕ್‍ನಲ್ಲಿ ಹರಿಬಿಡಲಾಗಿದ್ದ ಊಹಾಪೋಹಗಳನ್ನು ನಂಬಬೇಡಿ. ನಮ್ಮ ಮನೆಯಲ್ಲಿರುವ ಹಳೆಯ ಸ್ಕೂಟರ್ ರಿಪೇರಿ ಮಾಡಿಸಲೂ ನಮ್ಮಲ್ಲಿ ಹಣವಿಲ್ಲ.‌ ದಿಕ್ಕಿಲ್ಲದ ನಾವು ಹೊಸ ಕಾರು ಎಲ್ಲಿಂದ ಬುಕ್ ಮಾಡುವುದು. ಫೇಸ್‍ಬುಕ್ ಅಥವಾ ಸಾಮಾಜಿಕ ಜಾಲತಾಣದಲ್ಲಿ ವಿಜ್ಞಸಂತೋಷಿಗಳು ಇಲ್ಲಸಲ್ಲದ್ದನ್ನು ಬರೆದು ನಮಗೆ ನೋವು ಕೊಡಬೇಡಿ. ನೆಮ್ಮದಿಯಿಂದ ಬದುಕಲು ಬಿಡಿ” ಎಂದು ಕೊಲೆಯಾದ ಮನವಿ ಮಾಡಿದ್ದಾರೆ.

“ಶೆಡ್‍ಗೆ ಹೋಗಿ ನಾವು ನಟ ದರ್ಶನ್ ಅವರನ್ನು ಭೇಟಿ ಮಾಡಿದ್ದೇವೆ. ಅವರಿಂದ ಏನೋ ಪಡೆದುಕೊಂಡಿದ್ದೇವೆ ಎಂಬಂತೆ ಫೇಸ್‍ಬುಕ್‍ನಲ್ಲಿ ಪ್ರಚಾರವಾಗುತ್ತಿದೆ. ಕೈ ಮುಗಿದು ಕೇಳುತ್ತೇವೆ. ದಯಮಾಡಿ ಇಂಥದ್ದೆಲ್ಲಾ ಹಾಕಬೇಡಿ, ಈಗಾಗಲೇ ನಾವು ಸಾಕಷ್ಟು ನೊಂದಿದ್ದೇವೆ” ಎಂದು ಕಣ್ಣೀರು ಹಾಕಿದರು.

Advertisements

“ಜಾಮೀನು ರದ್ದು ಮಾಡಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿರುವುದನ್ನು ಸ್ವಾಗತಿಸುತ್ತೇವೆ. ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗವಿಸಿದ್ಧೇಶ್ವರ ಜಾತ್ರೆ; ಈ ಬಾರಿ ಅನ್ನದಾಸೋಹದಲ್ಲಿ ಜಿಲೇಬಿ ಸಿಹಿ!

ರೇಣುಕಸ್ವಾಮಿ ಕುಟುಂಬದ ಸಂಬಂಧಿ ಹಾಗೂ ನಿವೃತ್ತ ಪ್ರಾಚಾರ್ಯ ಷಡಾಕ್ಷರಯ್ಯ ಮಾತನಾಡಿ, “ಶಿವನಗೌಡರ ಕುಟುಂಬ ಈಗಾಗಲೇ ಮಗನಿಲ್ಲದೇ ನೊಂದಿದೆ. ನೊಂದ ಜೀವಗಳಿಗೆ ಮತ್ತಷ್ಟು ನೋವು ಕೊಡುವ ಕೆಲಸವನ್ನು ಯಾರೂ ಮಾಡಬಾರದು. ನಟನ ಬಗ್ಗೆ ನಿಮಗೆ ಅಭಿಮಾನವಿದ್ದರೆ ಅದು ನಿಮ್ಮಲ್ಲೇ ಇರಲಿ. ಬೇರೆಯವರಿಗೆ ನೋವು ಕೊಡಬಾರದು” ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.

“ಕೊಲೆ ಆರೋಪಿಗೆ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆಂದರೆ ಪ್ರಕರಣದಲ್ಲಿ ಸತ್ಯಾಂಶ ಇದೆ ಎನ್ನುವ ಅರ್ಥ ಬರುತ್ತದೆ. ಈ ಹಿನ್ನೆಲೆಯಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X