ಚಿತ್ರದುರ್ಗ | ಗೊಲ್ಲಹಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ಅಪರ ಜಿಲ್ಲಾಧಿಕಾರಿಗೆ ಮನವಿ

Date:

Advertisements

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಎಸ್‌ಸಿ ಕಾಲೋನಿಗೆ ಮೂಲಸೌಕರ್ಯ ಕೊರತೆಯಾಗಿದ್ದು, ಇಲ್ಲಿನ ನಿವಾಸಿಗಳ ಬದುಕು ಹೈರಾಣಾಗಿದೆ. ಹಾಗಾಗಿ ಶೀಘ್ರವೇ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಆದಿಕರ್ನಾಟಕ ಜನಾಂಗದವರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಬಾಳಿ ಬದುಕಿದ ಮನೆ ಅಕ್ಕಪಕ್ಕದ ಖಾಲಿ ನಿವೇಶನ ಜಾಗಗಳನ್ನು ರಾಷ್ಟ್ರೀಯ ಹೆದ್ದಾರಿಗೆ ಬಿಟ್ಟುಕೊಟ್ಟು ಈಗ ಬಹುತೇಕ ಮೂಲ ಸೌಕರ್ಯಗಳಿಲ್ಲದ ಜಾಗಕ್ಕೆ ಬಂದು ಅತಂತ್ರರಾಗಿದ್ದೇವೆ. ಇರುವುದನ್ನು ಬಿಟ್ಟುಕೊಟ್ಟು ಇಲ್ಲದಿರುವುದನ್ನು ಹುಡುಕುವಂತಾಗಿದೆ ನಮ್ಮ ಬದುಕು. ಹಾಗಾಗಿ ನಮಗೆ ಚರಂಡಿ, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಶೀಘ್ರವೇ ಕಲ್ಪಿಸಿ” ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆ ಅಗಲೀಕರಣಕ್ಕಾಗಿ ಮನೆ, ಖಾಲಿ ನಿವೇಶನಗಳನ್ನು ಬಿಟ್ಟುಕೊಟ್ಟು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಬದಲಿಯಾಗಿ ನಿವೇಶನಕ್ಕೆ ಗೋಮಾಳದಲ್ಲಿ ಮೂರು ಎಕರೆ ಜಮೀನು ಮಂಜೂರಾಗಿದ್ದು, ಈವರೆಗೂ ಹಕ್ಕುಪತ್ರಗಳನ್ನು ನೀಡಿಲ್ಲ. ಶಾಶ್ವತ ಹಕ್ಕುಪತ್ರ, ಖಾತೆಯಂತಹ ದಾಖಲಾತಿಗಳು ಇಲ್ಲದೆ ಬೇರೆ ಬೇರೆ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ಜೀವಿಸುತ್ತಿದ್ದೇವೆ. ರಾತ್ರಿಯಾದರೆ ಮಕ್ಕಳು, ಮುದುಕರು, ಮಹಿಳೆಯರು, ಪುರುಷರು ಬೆಳಕಿಲ್ಲದೆ ಹೊರಬರಲು ಹೆದರುವ ಸ್ಥಿತಿ ಉಂಟಾಗಿದೆ. ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಂಡು ವಾಸಮಾಡುವಂತಾಗಿದೆ. ಕೂಡಲೇ ವಿದ್ಯುತ್ ಸೇರಿದಂತೆ ಇತರ ವ್ಯವಸ್ಥೆಯಾಗಬೇಕು” ಎಂದು ಗೊಲ್ಲಹಳ್ಳಿಯ ಎಸ್‌ಸಿ ಕಾಲೋನಿ ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದೇಶಾದ್ಯಂತ ಮುಸ್ಲಿಂ ಅಲ್ಪಸಂಖ್ಯಾತರ ಮೇಲೆ ದಾಳಿ; ಕ್ರಮಕ್ಕೆ ಆಗ್ರಹ

ಈ ವೇಳೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ ಟಿ ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ನಿಸಾರ್, ಗೊಲ್ಲಹಳ್ಳಿ ನಿವಾಸಿಗಳಾದ ರಂಗಮ್ಮ, ಮಂಜಮ್ಮ, ಯಶೋಧಮ್ಮ, ಗುರುಸಿದ್ದಮ್ಮ, ನಿರ್ಮಲ, ಜಯಣ್ಣ, ರಂಗಸ್ವಾಮಿ, ಹಿಮಂತರಾಜು, ಹರೀಶ, ತಿಪ್ಪಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X