ಚಿತ್ರದುರ್ಗ | ಮನೆಯ ಯಜಮಾನ ನಿಧನದ ಬೆನ್ನಲ್ಲೇ ನೇಣಿಗೆ ಶರಣಾದ ತಾಯಿ-ಮಗಳು

Date:

Advertisements

ಮಾನಸಿಕವಾಗಿ ನೊಂದಿದ್ದರು ಎನ್ನಲಾದ ತಾಯಿ ಮತ್ತು ಮಗಳು ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಕುಟುಂಬದ ಯಜಮಾನನ ಸಾವಿನಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾದ ತಾಯಿ ಮಗಳಿಬ್ಬರು ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದ್ದು, ತಾಯಿ ಪುಷ್ಪ ಮತ್ತು ಮಗಳು ಲಾವಣ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಮಗಳು ಲಾವಣ್ಯ ಪ್ರಥಮ ಪಿಯುಸಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ.

ಸ್ಥಳೀಯರ ಮಾಹಿತಿಯ ಪ್ರಕಾರ, ಕುಟುಂಬದ ಬಸವರಾಜಪ್ಪ ಸುಮಾರು ಆರು ತಿಂಗಳ ಹಿಂದೆ ಹೃದಯಾಘಾತದಿಂದ ದಿಢೀರನೆ ಮೃತಪಟ್ಟಿದ್ದರು. ಬಸವರಾಜಪ್ಪ ನಿಧನದಿಂದ ಆಘಾತಗೊಂಡಿದ್ದ ತಾಯಿ ಮಗಳು ಸಾಮಾಜಿಕವಾಗಿ, ಸ್ನೇಹ ಸಲಿಗೆಯಿಂದ ಕಷ್ಟ ಸುಖಗಳನ್ನು ಹಂಚಿಕೊಳ್ಳಲು ಅಕ್ಕ ಪಕ್ಕದವರೊಂದಿಗೆ ಬೆರೆಯುತ್ತಿರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ಒತ್ತಡ ತಾಳಲಾರದೆ ಹೀಗೆ ಮಾಡಿಕೊಂಡಿರಬಹುದು ಎಂದು ಮಾಹಿತಿ ನೀಡಿದ್ದಾರೆ.

Advertisements

ಚಿಕ್ಕಜಾಜೂರು ಪೊಲೀಸ್ ಠಾಣೆ ಉಪನಿರೀಕ್ಷಕರಾದ ನೇತ್ರಾವತಿ ಮಾಹಿತಿ ನೀಡಿದ್ದು, “ಸುಮಾರು ಎಂಟತ್ತು ದಿನಗಳ ಹಿಂದೆಯೇ ಹಾಕಿಕೊಂಡಿರುವ ಶಂಕೆ ಇದ್ದು ತಾಯಿ ಮತ್ತು ಮಗಳ ಇಬ್ಬರ ದೇಹಗಳು ಸಂಪೂರ್ಣ ಕೊಳೆತು ಕೆಳಗೆ ಬಿದ್ದಿದೆ. ಈ ಘಟನೆ ಅಕ್ಕ ಪಕ್ಕದಲ್ಲಿ ಯಾರ ಗಮನಕ್ಕೂ ಬಂದಿಲ್ಲ. ಸ್ಥಳೀಯರ ಮಾಹಿತಿ ಪಡೆದಾಗ ಕುಟುಂಬದ ಯಜಮಾನ ಬಸವರಾಜಪ್ಪ ನಿಧನದ ನಂತರ ತಾಯಿ ಮಗಳು ಅಘಾತಗೊಂಡಿದ್ದರು ಎಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಕಾಲುವೆಗೆ ಬಿದ್ದ ಗೂಡ್ಸ್ ಆಟೋ: ಮಹಿಳಾ ಕೂಲಿಕಾರರನ್ನು ನಡು ನೀರಲ್ಲಿ ಬಿಟ್ಟು ಚಾಲಕ ಪರಾರಿ!

“ಸಾಮಾಜಿಕವಾಗಿ ಸ್ವಲ್ಪ ಬೆರೆಯುವುದು ಕಡಿಮೆ ಎನ್ನುವ ಮಾಹಿತಿ ಇದೆ. ಇದರಿಂದ ಯಜಮಾನನ ಸಾವಿನ ಮತ್ತು ಕುಟುಂಬದ ಒತ್ತಡ ನಿಭಾಯಿಸಲು ಸಾಧ್ಯವಾಗಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಸಂಪೂರ್ಣ ತನಿಖೆಯ ನಂತರವಷ್ಟೇ ಸಾವಿಗೆ ಕಾರಣ ತಿಳಿದು ಬರಲಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X