ಚಿತ್ರದುರ್ಗ | ಬಗರ್ ಹುಕುಂ ಭೂಮಿ ಮಂಜೂರಾತಿಗೆ ಹೋರಾಟ ಅಗತ್ಯ: ಪ್ರಜಾಶಕ್ತಿ ವೇದಿಕೆ ಬೋರಯ್ಯ

Date:

Advertisements

ರಾಜ್ಯದಲ್ಲಿ ಲಕ್ಷಾಂತರ ಮಂದಿ ರೈತರು ಬಗರ್‌ ಹುಕುಂ ಭೂಮಿಯ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಗಮನಸೆಳೆಯಲು ಇವರೆಲ್ಲರ ಹೋರಾಟ ಅಗತ್ಯವಿದೆ ಎಂದು ಪ್ರಜಾಶಕ್ತಿ ವೇದಿಕೆ ಬೋರಯ್ಯ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲಾ ಬಗರ್ ಹುಕುಂ ಸಾಗುವಳಿದಾರರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಸಕ್ರಮ ಸಾಗುವಳಿದಾರರ ಪಹಣಿ, ಸಾಗುವಳಿ ಪತ್ರ ವಿತರಣೆಗೆ ಸಂಬಂಧಿಸಿದಂತೆ ಮುಂದಿನ ಹೋರಾಟಗಳ ಬಗ್ಗೆ ರೂಪುರೇಷೆಗಳನ್ನು ನಿರ್ಧರಿಸುವ ಅಗತ್ಯವಿದೆ. ಬಗರ್ ಹುಕುಂ ಅರ್ಜಿಗಳಿಗೆ ಸಂಬಂಧಿಸಿದಂತೆ ಜಿಲ್ಲೆ, ತಾಲೂಕು ಮತ್ತು ರಾಜ್ಯದ ಕಂದಾಯ ಇಲಾಖೆಯ ಅಂಕಿ ಅಂಶಗಳಲ್ಲಿ ಲೋಪ ದೋಷಗಳಿವೆ. ತಾಲೂಕು ಮಟ್ಟದ ಸಮಿತಿಗಳು ನಾಮಕಾವಸ್ತೆ ಅಂಕಿ ಅಂಶಗಳನ್ನು ತೋರಿಸುತ್ತಿವೆ. ನೈಜ ಸಕ್ರಮ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ಪಹಣಿ ವಿತರಣೆ ಕೆಲಸವಾಗುತ್ತಿಲ್ಲ. ಈ ಬಗ್ಗೆ ಮುಖ್ಯ ಅಂಕಿ ಅಂಶಗಳನ್ನು ಕ್ರೂಢೀಕರಿಸಿ ಮುಂದಿನ ಹೋರಾಟಕ್ಕೆ ಸಿದ್ಧರಾಗಿ, ಸಕ್ರಮ ರೈತರ ಸಾಗುವಳಿ ಪಹಣಿಗೆ ಹೋರಾಟ ಮಾಡಬೇಕಿದೆ” ಎಂದು ಕರೆ ನೀಡಿದರು.

WhatsApp Image 2025 01 13 at 1.37.11 PM

ಸಭೆಯಲ್ಲಿ ನವಯಾನ ಬುದ್ಧ ಸಂಘದ ಮುಖ್ಯಸ್ಥ ಪ್ರೊ. ಸಿ ಕೆ ಮಹೇಶ್ವರಪ್ಪ ಮಾತನಾಡಿ, “ಭೂಮಿ ಸೇರಿದಂತೆ ಉದ್ದಿಮೆಗಳು ಕೇಂದ್ರೀಕೃತವಾಗದೆ ರಾಷ್ಟ್ರೀಕರಣವಾಗಬೇಕು ಎಂಬುದು ಸಂವಿಧಾನದಲ್ಲಿ ಉಲ್ಲೇಖವಾಗಿದೆ. ಸಾಮೂಹಿಕ ಬೇಸಾಯ ಪದ್ಧತಿ ಜಾರಿಯಲ್ಲಿರಬೇಕು. ಅದರಿಂದ ಬಂದ ಉತ್ಪನ್ನಗಳನ್ನು ಎಲ್ಲ ವರ್ಗದ ಜಾತಿ ಧರ್ಮದ ಜನ ಹಂಚಿಕೊಂಡು ತಿನ್ನಬೇಕು. ಇದು ಅಂಬೇಡ್ಕರ್ ಅವರ ಆಶಯವಾಗಿತ್ತು. ಭೂಮಿ ಎನ್ನುವುದು ಒಂದು ಕೇಂದ್ರೀಕೃತ ವ್ಯವಸ್ಥೆಯಾಗುತ್ತದೆ. ಇದನ್ನು ಕೇಂದ್ರವಾಗಿಟ್ಟುಕೊಂಡು ಅದರ ಒಡೆತನವನ್ನು ಸಾಧಿಸಿದವರು ಆರ್ಥಿಕ, ರಾಜಕೀಯವಾಗಿ ಸಬಲರಾಗುತ್ತಾರೆ. ಹೀಗಾಗಿಯೇ ಕೃಷಿ ಭೂಮಿ ಸಮಾನ ಹಂಚಿಕೆಯಾಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಮುಂದಿನ ದಿನಗಳಲ್ಲಿ ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲ ವರ್ಗದವರಿಗೂ ಸಮಾನ ಕೃಷಿ ಭೂಮಿ ಹಂಚಿಕೆಯಾಗಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಸಾಣೆಹಳ್ಳಿ ಶ್ರೀ ವಿರಚಿತ ‘ಮೋಳಿಗೆ ಮಾರಯ್ಯ’ ಕಿರುನಾಟಕ ಯಶಸ್ವಿ ಪ್ರದರ್ಶನ

ಸಭೆಯಲ್ಲಿ ಮಾಧ್ಯಮ ಅಕಾಡೆಮಿ ಸದಸ್ಯ ಪತ್ರಕರ್ತ ಆಹೋಬಲಪತಿ, ಹೊಳೆಯಪ್ಪ, ರಾಜಣ್ಣ ಲಕ್ಷ್ಮಿಸಾಗರ, ದಸಂಸದ ದುರುಗೇಶ್, ಗೋನೂರು ಹನುಮಂತಪ್ಪ, ಮದಕರಿಪುರ ಸೂರಣ್ಣ, ನೆಲಗೇತನಹಟ್ಟಿ ಬೋರಯ್ಯ, ಹಿರಿಯೂರು ಹುಸೇನ್, ಯಾದವ್ ಹೊಸದುರ್ಗ, ಚಿಕ್ಕುಳ್ಳಾರ್ತಿ ತಿಪ್ಪಯ್ಯ, ನಿಂಗಪ್ಪ, ಗೌನಹಳ್ಳಿ ಈರಣ್ಣ ಕರಿಯಪ್ಪ ಮತ್ತು ಚಿತ್ರದುರ್ಗ ಜಿಲ್ಲೆಯ ಎಲ್ಲ ತಾಲೂಕಿನ ನೂರಾರು ಅರಣ್ಯ ಮತ್ತು ಬಗರ್ ಹುಕುಂ ಸಾಗುವಳಿದಾರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X