ಚಿತ್ರದುರ್ಗ | ಶಿಕ್ಷಣವಿಲ್ಲದೆ ಯಾವುದೇ ಸಮಾಜದ ಏಳಿಗೆಯಾಗುವುದಿಲ್ಲ: ಈಶ್ವರಾನಂದಶ್ರೀ

Date:

Advertisements

ಯಾವುದೇ ಸಮುದಾಯಗಳು ಮುಂದುವರೆಯಬೇಕೆಂದರೆ ಶಿಕ್ಷಣದಲ್ಲಿ ಮುಂದೆ ಬರಬೇಕು. ಶಿಕ್ಷಣದಲ್ಲಿ ಜಾಗೃತಿ ಇರಬೇಕು. ಶಿಕ್ಷಣವಿಲ್ಲದೇ ಸಮಾಜಗಳು ಏಳಿಗೆಯಾಗುವುದಿಲ್ಲ. ಇತ್ತೀಚೆಗೆ ಹಿಂದುಳಿದ ಸಮುದಾಯಗಳಲ್ಲಿಯೂ ಶಿಕ್ಷಣದ ಬಗ್ಗೆ ಜಾಗೃತಿಯಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ದಿ ಸಂಘ ಹಾಗೂ ಜಿಲ್ಲಾ ಕುರುಬರ ಸಂಘದಿಂದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ 2023-2024ನೇ ಸಾಲಿನಲ್ಲಿ ಕುರುಬ ಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

“ನಮ್ಮ ಸಮುದಾಯದಲ್ಲಿ ಅನೇಕ ಪ್ರತಿಭಾವಂತರಿದ್ದರೂ ಸಮಾಜ, ಸಂಘಸಂಸ್ಥೆಗಳು ಹಾಗೂ ಸಂಘಟನೆಗಳು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಹಿಂದೆ ಬಿದ್ದಿವೆ. ತಾತ್ಸಾರ ಮನೋಭಾವನೆ ಬೇಡ. 2002ರಲ್ಲಿ ಆರಂಭಗೊಂಡ ಪ್ರತಿಭಾ ಪುರಸ್ಕಾರ ಇಲ್ಲಿಯವರೆಗೂ ಪ್ರತಿ ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿದೆ” ಎಂದು ತಿಳಿಸಿದರು.

Advertisements
1000404417

“ನಮ್ಮ ಸಮುದಾಯದಲ್ಲಿ ಬಡವರಿರಬಹುದು. ಆದರೆ ಪ್ರತಿಭಾವಂತರಿಗೆ ಕೊರತೆಯಿಲ್ಲ. ಅಂತಹವರನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವಾಗಬೇಕು. ಇದಕ್ಕೆ ಹೆಚ್ಚಿನ ನೆರವು ಅಗತ್ಯವಿದೆ. ಪ್ರತಿಯೊಬ್ಬರೂ ಆರ್ಥಿಕ ನೆರವು ನೀಡಿದರೆ ಪ್ರತಿ ವರ್ಷವೂ ದೊಡ್ಡ ಮಟ್ಟದಲ್ಲಿ ಪ್ರತಿಭೆಗಳಿಗೆ ಸಹಾಯವಾಗಲಿದೆ” ಎಂದು ಮನವಿ ಮಾಡಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡದಿದ್ದರೂ ಅಧಿಕಾರಿಗಳು ವಿನಾಕಾರಣ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕುತಂತ್ರ ಮಾಡುತ್ತಿದ್ದಾರೆ.ಹಾಗಾಗಿ ನೈತಿಕವಾಗಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಲ್ಲಬೇಕು. ದ್ವೇಷ ಅಸೂಯೆ ಬಿಟ್ಟು ಮೊದಲು ಸಂಘಟಿತರಾಗಿ ಧರ್ಮ, ದೇಶ ಕಾಯುವ ಸಮರ್ಥ ಮಕ್ಕಳನ್ನು ತಯಾರು ಮಾಡಿ” ಎಂದು ಕುರುಬ ಜನಾಂಗದವರಿಗೆ ಸ್ವಾಮೀಜಿ ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿ, “ಪ್ರತಿ ಮಗುವಿನಲ್ಲಿರುವ ಪ್ರತಿಭೆ ಗುರುತಿಸುವ ಕೆಲಸ ಮಾಡಬೇಕು. ಅಂಕಗಳು ಮಾನದಂಡವಾಗುವ ಬದಲು ಸಾಮರ್ಥ್ಯವನ್ನು ಗುರುತಿಸಬೇಕು. ಮಕ್ಕಳಿಗೆ ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಬೇಕು. ಇಂದು ಮಕ್ಕಳು ಮೊಬೈಲ್, ಫೇಸ್‌ಬುಕ್‌, ವಾಟ್ಸಾಪ್ ವ್ಯಾಮೋಹಕ್ಕೆ ಒಳಗಾಗುತ್ತಿದ್ದು, ಪೋಷಕರು, ಶಿಕ್ಷಕರು ಅದರಿಂದ ಅವರನ್ನು ಹೊರತರಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ ಟಿ ಜಗದೀಶ್ ಮಾತನಾಡಿ, “ಡಾ.ಅಂಬೇಡ್ಕರ್ ಅವರ ಘೋಷವಾಕ್ಯದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಎಲ್ಲ ಸಮಾಜಗಳು ಒತ್ತುಕೊಡಬೇಕು. ಬಡತನ ದಾರಿದ್ರ್ಯದಿಂದ ಹೊರಬರಲು ಶಿಕ್ಷಣವೊಂದೇ ದಾರಿ. ಅದರಿಂದ ಶಿಕ್ಷಣದ ಬಗ್ಗೆ ಜಾಗೃತಿ ಹೊಂದಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರಜಿನಿ ಲೇಪಾಕ್ಷಿ, ಕುರುಬರ ಸಂಘದ ಮಹಿಳಾಧ್ಯಕ್ಷೆ ಎನ್ ಎಂ ಪುಷ್ಪವಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್, ಡಾ. ರೇಖಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್ ಸೇರಿದಂತೆ ಇತರ ಮುಖಂಡರು ಹಾಗೂ ಸಮಾಜ ಬಾಂಧವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X