ಚಿತ್ರದುರ್ಗ | ಸಾಕು ನಾಯಿಗಳಿಂದ ಕಾರ್ಮಿಕನ ಮೇಲೆ ಮಾರಣಾಂತಿಕ ದಾಳಿ

Date:

Advertisements

ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

ಶಿರಾದ ಯರದಕಟ್ಟೆ ಗ್ರಾಮದ ಮಧು (23 ವರ್ಷ) ಗಾಯಾಳು. ನಂದಿಹಳ್ಳಿ ಬಳಿ ಇರುವ ಖಾಸಗಿ ಅಸೆಂಟ್ ಪಿಯು ಕಾಲೇಜು ಶಿಕ್ಷಣ ಸಂಸ್ಥೆಯ ಮಾಲೀಕನಿಗೆ ಸೇರಿದ ನಾಯಿಗಳು ವ್ಯಕ್ತಿಯ ಬಲಗೈ, ಬೆನ್ನು, ತೊಡೆ ಸೇರಿದಂತೆ ದೇಹದ ಇನ್ನಿತರ ಭಾಗಗಳಿಗೆ ಮನಸೋ ಇಚ್ಛೆ ದಾಳಿ ನಡೆಸಿ, ಕಚ್ಚಿ ಗಂಭೀರ ಗಾಯಗೊಳಿಸಿವೆ. ಇದರಿಂದ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಗಾಯಗೊಂಡ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಗಾಯಾಳು ಊಟ ತರಲು ನಂದಿಹಳ್ಳಿ ಕಡೆಯಿಂದ ಆದಿವಾಲ ಕಡೆಗೆ ನಡೆದುಕೊಂಡು ಬರುವಾಗ, ಪಿಯು ಕಾಲೇಜಿನ ಸಂಸ್ಥೆಯ ಮಾಲೀಕನ ನಾಯಿಗಳು ದಾಳಿ ನಡೆಸಿವೆ. ಕಾರ್ಮಿಕನ ಕಿರುಚಾಟ ಕೇಳಿ ವಾಹನ ಸವಾರರು ಗಾಯಾಳುವನ್ನು ರಕ್ಷಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇರಬೇಕಿದ್ದ ನಾಯಿಗಳು ರಸ್ತೆಗೆ ಬಂದು ಅಮಾಯಕನ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ಸಂಸ್ಥೆಯ ಕಾರ್ಯದರ್ಶಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಆಸ್ಪತ್ರೆ ಬಳಿ ಬಂದು ಗಾಯಾಳುವನ್ನು ನೋಡುತ್ತಾ ನಿಂತಿದ್ದ ಸಂಸ್ಥೆಯ ಟ್ರಸ್ಟಿ ಮೂರ್ತಿ ಅವರನ್ನು ಅಲ್ಲಿದ್ದ ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅಮಾಯಕನ ಜೀವಕ್ಕೆ  ಅಪಾಯವಾದರೆ ನೀವೇ ಹೊಣೆಗಾರರು, ಜೊತೆಗೆ ನಿಮ್ಮ ಶಿಕ್ಷಣ ಸಂಸ್ಥೆಯನ್ನು ಮುಚ್ಚ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X