ಹಿರಿಯೂರಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್ನಲ್ಲಿ ಎಟಿಎಂಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುವ ವಾಹನದಲ್ಲಿದ್ದ ಅನಧಿಕೃತ ₹1.44 ಕೋಟಿಯನ್ನು ಹಿರಿಯೂರು ತಹಶೀಲ್ದಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಎಸ್ಎಸ್ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.
ತುಮಕೂರು ಮತ್ತು ಶಿರಾ ಭಾಗದ ವಾಹನವಾಗಿದ್ದು, ಇದರಲ್ಲಿ ₹1.44 ಲಕ್ಷ ಹೇಗೆ ಬಂತು ಹಾಗೂ ಈ ವಾಹನ ಚಿತ್ರದುರ್ಗದ ಕಡೆಗೆ ಏಕೆ ಬಂತು ಎನ್ನುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಹಣವನ್ನು ವಶಕ್ಕೆ ಪಡೆದುಕೊಂಡಿರುವ ಸ್ಥಳಕ್ಕೆ ಅಧಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಎಟಿಎಂಗಳ ಹಣ ನಿರ್ವಹಣೆ ಮಾಡುವ ಸಿಎಂಎಸ್ ಕಂಪನಿಯು ತುಮಕೂರಿನಿಂದ ಶಿರಾ ತಾಲೂಕಿನವರೆಗೆ ಮಾತ್ರ ಎಟಿಎಂಗಳಿಗೆ ಹಣ ತುಂಬಲು ಅನುಮತಿ ಪಡೆದಿತ್ತು. ಆದರೆ ಶಿರಾ ತಾಲೂಕು ಹೊರತು ಪಡಿಸಿ ಹಿರಿಯೂರು ತಾಲೂಕು ಗಡಿ ಪ್ರವೇಶಿಸಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಹಿರಿಯೂರು ಗಡಿ ಪ್ರವೇಶಿಸಿದ್ದಕ್ಕೆ ಯಾವುದೇ ಸೂಕ್ತ ದಾಖಲೆ ಪ್ರಸ್ತುತ ಪಡಿಸಿರುವುದಿಲ್ಲ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಟಿಎಂಗಳಿಗೆ ಹಣ ತುಂಬಲು ಜಿಲ್ಲೆಯ ಜಿಲ್ಲಾಧಿಕಾರಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದ್ದರಿಂದ ₹1.44 ಕೋಟಿ ಹಣ ಹಾಗೂ ವಾಹನ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾಗಿ ತಹಶೀಲ್ದಾರ್ ರಾಜೇಶ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಬೇರೆಯವರು ಬೆಳೆಯಬಾರದೆಂದು ಸಚಿವ ಈಶ್ವರ ಖಂಡ್ರೆ ತನ್ನ ಮಗನಿಗೆ ಟಿಕೆಟ್ ಕೊಡಿಸಿದ್ರಾ : ಸಚಿವ ಭಗವಂತ ಖೂಬಾ
ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ವಶ ಪಡಿಸಿಕೊಂಡ ಹಣವನ್ನು ಸೂಕ್ತ ವಿಚಾರಣೆಯ ಬಳಿಕ ಜಿಲ್ಲಾ ಪಂಚಾಯತ್ ಸಿಇಒ ನೇತೃತ್ವದಲ್ಲಿ ನಗದು ಜಪ್ತಿ ಸಮಿತಿ ವಶಕ್ಕೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ.