ಚಿತ್ರದುರ್ಗ | ಚೆಕ್ ಪೋಸ್ಟ್‌ನಲ್ಲಿ ದಾಖಲೆಯಿಲ್ಲದ ಬರೋಬ್ಬರಿ ₹1.44 ಕೋಟಿ ಹಣ ವಶ

Date:

ಹಿರಿಯೂರಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಎಟಿಎಂಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುವ ವಾಹನದಲ್ಲಿದ್ದ ಅನಧಿಕೃತ ₹1.44 ಕೋಟಿಯನ್ನು ಹಿರಿಯೂರು ತಹಶೀಲ್ದಾ‌ರ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್‌ ಮತ್ತು ಎಸ್‌ಎಸ್‌ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.

ತುಮಕೂರು ಮತ್ತು ಶಿರಾ ಭಾಗದ ವಾಹನವಾಗಿದ್ದು, ಇದರಲ್ಲಿ ₹1.44 ಲಕ್ಷ ಹೇಗೆ ಬಂತು ಹಾಗೂ ಈ ವಾಹನ ಚಿತ್ರದುರ್ಗದ ಕಡೆಗೆ ಏಕೆ ಬಂತು ಎನ್ನುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಹಣವನ್ನು ವಶಕ್ಕೆ ಪಡೆದುಕೊಂಡಿರುವ ಸ್ಥಳಕ್ಕೆ ಅಧಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಎಟಿಎಂಗಳ ಹಣ ನಿರ್ವಹಣೆ ಮಾಡುವ ಸಿಎಂಎಸ್ ಕಂಪನಿಯು ತುಮಕೂರಿನಿಂದ ಶಿರಾ ತಾಲೂಕಿನವರೆಗೆ ಮಾತ್ರ ಎಟಿಎಂಗಳಿಗೆ ಹಣ ತುಂಬಲು ಅನುಮತಿ ಪಡೆದಿತ್ತು. ಆದರೆ ಶಿರಾ ತಾಲೂಕು ಹೊರತು ಪಡಿಸಿ ಹಿರಿಯೂರು ತಾಲೂಕು ಗಡಿ ಪ್ರವೇಶಿಸಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಹಿರಿಯೂರು ಗಡಿ ಪ್ರವೇಶಿಸಿದ್ದಕ್ಕೆ ಯಾವುದೇ ಸೂಕ್ತ ದಾಖಲೆ ಪ್ರಸ್ತುತ ಪಡಿಸಿರುವುದಿಲ್ಲ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಟಿಎಂಗಳಿಗೆ ಹಣ ತುಂಬಲು ಜಿಲ್ಲೆಯ ಜಿಲ್ಲಾಧಿಕಾರಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದ್ದರಿಂದ ₹1.44 ಕೋಟಿ ಹಣ ಹಾಗೂ ವಾಹನ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾಗಿ ತಹಶೀಲ್ದಾರ್ ರಾಜೇಶ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೇರೆಯವರು ಬೆಳೆಯಬಾರದೆಂದು ಸಚಿವ ಈಶ್ವರ ಖಂಡ್ರೆ ತನ್ನ ಮಗನಿಗೆ ಟಿಕೆಟ್ ಕೊಡಿಸಿದ್ರಾ : ಸಚಿವ ಭಗವಂತ ಖೂಬಾ

ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ವಶ ಪಡಿಸಿಕೊಂಡ ಹಣವನ್ನು ಸೂಕ್ತ ವಿಚಾರಣೆಯ ಬಳಿಕ ಜಿಲ್ಲಾ ಪಂಚಾಯತ್‌ ಸಿಇಒ ನೇತೃತ್ವದಲ್ಲಿ ನಗದು ಜಪ್ತಿ ಸಮಿತಿ ವಶಕ್ಕೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....