ಚಿತ್ರದುರ್ಗ | ವಿದ್ಯಾರ್ಥಿಗಳಿಂದ ವಾರದ ಸಂತೆ, ಚೌಕಾಸಿ ಮಾಡಿ ಖರೀದಿಸಿದ ಗ್ರಾಹಕರು

Date:

ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ (ಫೆಬ್ರವರಿ 7) ಎಸ್‌ಆರ್‌ಎಸ್‌ ಹೆರಿಟೇಜ್‌ ಶಾಲೆಯ ಪುಟಾಣಿಗಳು ‘ವಾರದ ಸಂತೆ ನಮ್ಮ ಜೊತೆ’ ಎನ್ನುವ ವಿಶೇಷ ತರಕಾರಿ ಸಂತೆ ನಡೆಸಿದರು.

ನಗರಸಭೆ ಪೌರಾಯುಕ್ತೆ ಎಂ ರೇಣುಕಾ ತರಕಾರಿ ಖರೀದಿಸುವ ಮೂಲಕ ಸಂತೆಗೆ ಚಾಲನೆ ನೀಡಿದರು. ಶಾಲೆಯ 5ನೇ ತರಗತಿಯ 150 ಮಂದಿ ವಿದ್ಯಾರ್ಥಿಗಳು ಹಿರಿಯರು ನಾಚುವಂತೆ ಸಂತೆ ನಡೆಸಿದರು.

ಮಾತ್ರವಲ್ಲದೆ, ಈರುಳ್ಳಿ, ಬೆಳ್ಳುಳ್ಳಿ, ನುಗ್ಗೆಕಾಯಿ, ಹೀರೆಕಾಯಿ, ಬದನೆಕಾಯಿ, ಬೆಂಡೆಕಾಯಿ, ಕ್ಯಾರೆಟ್, ಬೀನ್ಸ್‌, ಆಲೂಗಡ್ಡೆ, ಸೌತೆಕಾಯಿ, ಎಲೆಕೋಸು, ಮೂಲಂಗಿ, ಬಟಾಣಿ, ಜವಳಿಕಾಯಿ, ಮೆಣಸಿನಕಾಯಿ, ಸೊಪ್ಪು- ಮೆಂತ್ಯ, ಪುದೀನ, ಕೊತ್ತುಂಬರಿ, ಸಬ್ಸಿಗೆ, ಅರಿವೆ, ಕರಿಬೇವು, ಪಾಲಕ್‌, ನಿಂಬೆಹಣ್ಣು ಹೀಗೆ ಬಗೆ ಬಗೆಯ ಮತ್ತು ತಾಜಾ ತರಕಾರಿಗಳನ್ನು ಮಾರಾಟ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೇಳದಲ್ಲಿ ಪೋಷಕರು ಶಿಕ್ಷಕರು, ಸಾರ್ವಜನಿಕರು, ಗ್ರಾಹಕರು ಉತ್ಸಾಹದಿಂದ ತಮಗಿಷ್ಟವಾದ ತರಕಾರಿಗಳನ್ನು ವಿದ್ಯಾರ್ಥಿಗಳೊಂದಿಗೆ ಚೌಕಾಸಿ ಮಾಡಿ ಖರೀದಿಸಿದರು.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ಎಸ್‌ಆರ್‌ಎಸ್‌ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಬಿ ಎ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ ಎಲ್‌ ಅಮೋಘ, ಸಂಸ್ಥೆ ಆಡಳಿತಾಧಿಕಾರಿ ಡಾ ಟಿ ಎಸ್‌ ರವಿ, ಶೈಕ್ಷಣಿಕ ಸಂಯೋಜಕ ಡಿ ಎಂ ಜಗದೀಶ್‌, ಸಹ ಪಠ್ಯೇತರ ವಿಭಾಗ ಸಂಯೋಜಕ ಸುನೀಲ್‌ ಭಟ್‌, ಪ್ರಾಂಶುಪಾಲ ಎಂ ಎಸ್‌ ಪ್ರಭಾಕರ್‌ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...