ಚಿತ್ರದುರ್ಗ | ನಿರೀಕ್ಷೆ ಮೀರಿ ಕಡಲೆ ಬಿತ್ತನೆ ಬೀಜ ವಿತರಣೆ; ಭರವಸೆ ಮೂಡಿಸಿದ ಬೆಳೆ

Date:

Advertisements

ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಕಡಲೆ ಬಿತ್ತನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬೀಜ ವಿತರಣೆಯಾಗಿದೆ. ಕೃಷಿ ಇಲಾಖೆ 20,000 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆಯ ಗುರಿ ಹೊಂದಿತ್ತು. ಆದರೆ, 23,500ಕ್ವಿಂಟಲ್‌ ಬೀಜವನ್ನು ರೈತರಿಗೆ ವಿತರಿಸಿದೆ.

ಕೃಷಿ ಇಲಾಖೆ ಅಂದಾಜು ಪ್ರಕಾರ, ಹಿಂಗಾರು ಹಂಗಾಮಿನಲ್ಲಿ 57,000 ಹೆಕ್ಟೇರ್‌ ಬಿತ್ತನೆ ಗುರಿ ಇದೆ. ಇದರಲ್ಲಿ ಕಡಲೆ ಪ್ರಮುಖ ಬೆಳೆಯಾಗಿದ್ದು, 28,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ 27,000 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಿದ್ದು, ಡಿಸೆಂಬರ್‌ ಮೊದಲ ವಾರದವರೆಗೆ ಕಾಲಾವಕಾಶವಿದೆ. ಬಿತ್ತನೆ ಪ್ರದೇಶ ನಿರೀಕ್ಷೆ ಮೀರಿ ಹೆಚ್ಚಾಗುವ ಸಾಧ್ಯತೆ ಇದೆ.

ಹಿರಿಯೂರು ತಾಲ್ಲೂಕಿನ ಐಮಂಗಲ, ಕಸಬಾ, ಚಿತ್ರದುರ್ಗ ತಾಲ್ಲೂಕಿನ ತುರುವನೂರು, ಕಸಬಾ ಹಾಗೂ ಚಳ್ಳಕೆರೆ ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಕಡಲೆ ಪ್ರಮುಖ ಬೆಳೆ. ಕಪ್ಪು ಮಣ್ಣು ಹೊಂದಿದ ಜಮೀನು ಕಡಲೆ ಬೆಳೆಗೆ ಸೂಕ್ತ. ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಅಲ್ಲಲ್ಲಿ ಬೆಳೆಯಲಾಗುತ್ತದೆ. ಮುಂಗಾರು ಕೈಕೊಟ್ಟು ಸಂಕಷ್ಟಕ್ಕೆ ಸಿಲುಕಿದ ರೈತರು ಕಡಲೆ ಕೈಹಿಡಿಯುವು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Advertisements

ಕಡಲೆ ಬಿತ್ತನೆ ಸಾಮಾನ್ಯವಾಗಿ ಅ.15ರಿಂದ ಡಿಸೆಂಬರ್‌ ಮೊದಲ ವಾರದವರೆಗೆ ನಡೆಯುತ್ತದೆ. ಚಳಿಗಾಲದಲ್ಲಿ ಬೀಳುವ ಇಬ್ಬನಿಗೆ ಕಡಲೆ ಹುಲುಸಾಗಿ ಬೆಳೆಯುತ್ತದೆ. ಮಳೆ ಕೊರತೆ ಉಂಟಾಗಿ ರೈತರು ಕಡಲೆ ಬಿತ್ತನೆಗೂ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ನವೆಂಬರ್‌ ಮೊದಲ ವಾರ ಬಿದ್ದ ಮಳೆ ರೈತರಲ್ಲಿ ಮಂದಹಾಸ ಮೂಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X