ಚಿತ್ರದುರ್ಗ | ಲಿಂಗಾಯತ ಸಮುದಾಯದಿಂದ ಗೆದ್ದ ಯಡಿಯೂರಪ್ಪ, ಸಮುದಾಯದ ವಿರುದ್ಧವೇ ಮಾತನಾಡುವುದು ಸರಿಯಲ್ಲ: ಅಗ್ರಹಾರ ಮಂಜುನಾಥ್

Date:

Advertisements

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಏನಾದರೂ ಶಾಸಕರಾಗಿದ್ದರೆ ಅದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಕೃಪಾಶೀರ್ವಾದದಿಂದ ಅದನ್ನು ಅವರು ಮನಗಾಣಬೇಕೆಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಹೇಳಿದರು.

ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯಿತ ಸಮುದಾಯದ ಬಗ್ಗೆ ಹಾಗೂ ಯಡಿಯೂರಪ್ಪ ಅವರ ಬಗ್ಗೆ ಕೀಳಾಗಿ ಮಾತಾಡುವುದು ಸರಿಯಲ್ಲ. ಕೂಡಲೇ ಕ್ಷಮೆ ಕೇಳಬೇಕು ಎಂದರು.

ಇನ್ನು ಗೋವಿಂದ ಕಾರಜೋಳ ಅವರು ನಿರಾತಂಕವಾಗಿ ಚುನಾವಣೆಯನ್ನು ಮಾಡಬಹುದು. ನಾವು ಹೆಚ್ಚಿನ ಮತಗಳನ್ನು ಹಾಕಿಸುತ್ತೇವೆ ಎಂದರು. ಹೊಳಲ್ಕೆರೆ ಶಾಸಕ ಚಂದ್ರಪ್ಪ ತಮ್ಮ ಚುನಾವಣೆಯನ್ನು ಮಾಡಿದ್ದಾರೆಯೇ ಹೊರೆತು ಬೇರೆಯಾವ ಚುನಾವಣೆಯನ್ನು ಮಾಡಿಲ್ಲ. ಇಂದು ಕೂಡ ತಮಗೆ ಬೇಕಿರುವ ಕೆಲವು ಜನರನ್ನು ಇಟ್ಟುಕೊಂಡು ಸಭೆ ಮಾಡಿದ್ದಾರೆ. ಅವರಿಗೆ ತಾಕತ್ ಇದ್ದರೆ ಅವರಿಗೆ ಗಂಡಸುತನ ಇದ್ದರೆ ಅವರು ಒಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದು ಬರಲಿ, ಎಂಎಲ್‌ಎ ನಿಗಮ ಮಂಡಳಿ ಸ್ಥಾನ ನಮಗೆ ಬೇಕು ಎಂದು ಹೇಳುತ್ತಾರೆ. ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಯೇ ಹೊರೆತು ಸಂಘ ಸಂಸ್ಥೆ ಪಕ್ಷಗಳಿಗಾಗಿ ಚುನಾವಣೆ ಮಾಡಿಲ್ಲ ಎಂದು ಹೇಳಿದರು.

Advertisements

ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಸದಸ್ಯ ಜಯಸಿಂಹ ಕಾಟ್ರೋತ್ ಅವರು ಮಾತನಾಡಿ ಇಂತಹ ವ್ಯಕ್ತಿ ಬಿಜೆಪಿ ಯಡಿಯೂರಪ್ಪ ಅವರ ಬಗ್ಗೆ ಮಾತಾಡುತ್ತಾರೆ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 10 ಸದದಸ್ಯರನ್ನು ಗೆಲ್ಲಿಸಿಕೊಳ್ಳುವ ಗಂಡಸುತವಿರಲಿಲ್ಲವೇ? ಸದಾನಂದಗೌಡರು ಸಿಎಂ ಈಶ್ವರಪ್ಪ ನಂತವರಿಗೇ ಟಿಕೆಟ್ ಕೊಟ್ಟಿಲ್ಲ. ಅವರಿಗಿಂತ ಇವರು ದೊಡ್ಡವರ ಅವರಿಗಿಂತ ಇವರು ದೊಡ್ಡವರಾ? ಪಕ್ಷ ಯಾರಿಗೆ ಟಿಕೆಟ್ ಕೊಟ್ಟಿದಿಯೋ ಅವರ ಪರ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಪಾರ್ಟಿವಿಥ್ ಎ ಡಿಫರೆನ್ಸ್ ಗೊತ್ತಿಲ್ಲ. ಇದರಿಂದ ಈ ರೀತಿ ಮಾತಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ ನಿಷ್ಠಾವಂತರ ಶಾಪ ತಟ್ಟುತ್ತದೆ. ಕೂಡಲೇ ಚಂದ್ರಪ್ಪ ಬೇಷರತ್ ಕ್ಷಮೆ ಯಾಚಿಸಿ ಬಿಜೆಪಿ ಪರವಾಗಿ ಕೆಲಸ ಮಾಡಿದರೆ ಗೌರವ ಬರುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಯಸಿಂಹ ಕಾಟ್ರೋತ್, ಅಗ್ರಹಾರ ಬಸವರಾಜ್,  ತಿಪ್ಪೇಸ್ವಾಮಿ ಮತ್ತಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X