ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

Date:

Advertisements

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಟ್ರಸ್ಟಿಗಳ‌ ಅವ್ಯವಹಾರದ ವಿರುದ್ಧ ಎಂಟು ದಿನಗಳ ಹೋರಾಟ ನೆಡೆಸಿ, ತನಿಖೆಯ ಭರವಸೆ ನಂತರ ಮುಂದೂಡಿದ್ದ ಆಶ್ರಮ ರಕ್ಷಣಾ ಸಮಿತಿಯು ಮತ್ತೆ ಹೋರಾಟ ಪ್ರಾರಂಭಿಸಿದ್ದು, ಕೆಲವರು ಅಕ್ರಮವಾಗಿ ಟ್ರಸ್ಟಿಗಳಾಗಿ ಸೇರಿಕೊಂಡಿದ್ದಾರೆ. ಅವರು ಟ್ರಸ್ಟ್‌ನ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಆಶ್ರಮ ರಕ್ಷಣಾ ಸಮಿತಿಯ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಆಶ್ರಮದ ಹೊರಗೆ ಪ್ರತಿಭಟನೆ ನಡೆಸಿದರು.

1002203542

ಟ್ರಸ್ಟ್‌ನ ನೂತನ ಅಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬಂದಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು “ಆಶ್ರಮಕ್ಕೆ ಅಕ್ರಮವಾಗಿ ಟ್ರಸ್ಟಿಗಳನ್ನು ನೇಮಕ ಮಾಡಲಾಗಿದೆ. ಟ್ರಸ್ಟಿನ ಸದಸ್ಯರು ಹಣಕಾಸು ಅವ್ಯವಹಾರಗಳು ನಡೆಸಿದ್ದು, ಈ ಬಗ್ಗೆ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆಶ್ರಮ ಉಳಿಸಲು ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸೇರಿ ಹೋರಾಟ ಮಾಡಿದ್ದೇವೆ. ಸರ್ಕಾರ ಏಪ್ರಿಲ್ ತಿಂಗಳಲ್ಲಿ ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ರು. ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ತನಿಖೆ ಮುಗಿದು ಆದೇಶ ಬರುವವರೆಗೆ ಆಶ್ರಮದ ಒಳಗೆ ಟ್ರಸ್ಟಿಗಳನ್ನು ಬಿಡಬಾರದು’ ಎಂದು ಮನವಿ ಮಾಡಿದರು.

Advertisements
1002203544

‘ನಮಗೆ ಮಾದಾರ ಚನ್ನಯ್ಯ ಶ್ರೀಗಳ ಮೇಲೆ ಭಕ್ತಿ ಇದೆ. ಆದರೆ, ಇಲ್ಲಿನ ಟ್ರಸ್ಟಿಗಳು ತಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿ ಹಾಕಿಕೊಳ್ಳಲು ವಿವಿಧ ರೀತಿಯ ಷಡ್ಯಂತ್ರ ರೂಪಿಸುತ್ತಿದ್ದಾರೆ’ ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಳೆ ಬಂದರೆ ಸೋರುವ ಬೀಳುವ ಹೆಂಚು ಪ್ರಾಣಿಗಳ ವಾಸಸ್ಥಾನವಾದ ಅಮರಾವತಿ ಶಾಲೆ; ಶಿಕ್ಷಣಾಸಕ್ತರ ಆರೋಪ

‘ತನಿಖೆಗೆ ನನ್ನ ಸಂಪೂರ್ಣ ಸಹಮತ ಇದೆ. ಜಿಲ್ಲಾಧಿಕಾರಿ ನೇತೃತ್ವದ ತಂಡ ಪರಿಶೀಲನೆ ನಡೆಸಿ ವರದಿ ಕೊಡಲಿ. ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಗೊಂದಲಗಳಿದ್ದರೆ ಕೂತು ಬಗೆಹರಿಸಿಕೊಳ್ಳೋಣ. ಆಶ್ರಮದ ಆಡಳಿತ ಸ್ವಚ್ಛವಾಗಿರಬೇಕು. ಅದಕ್ಕೆ ಸ್ವಾಮೀಜಿ ಸಹಕಾರ ನೀಡಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಸಂತೋಷ್, ವಿನೋದ್. ಉಮೇಶ್, ದುಮ್ಮಿ ಬಸವರಾಜಪ್ಪ, ಎ.ಚಿತ್ತಪ್ಪ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

Download Eedina App Android / iOS

X