ಚಿತ್ರದುರ್ಗ | ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು: ಸಹಾಯಕ ನಿರ್ದೇಶಕ

Date:

ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆ‌ರ್ ರಜನಿಕಾಂತ್‌ ರೈತರಿಗೆ ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಲಾಭದಾಯಕ ಹೈನುಗಾರಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಖರ್ಚು ವೆಚ್ಚವನ್ನು ಲೆಕ್ಕವಿಟ್ಟು ವೈಜ್ಞಾನಿಕವಾಗಿ ಉತ್ತಮ ತಳಿಯ ಹಸು ಎಮ್ಮೆಗಳನ್ನು ಖರೀದಿಸಿ, ಕೊಟ್ಟಿಗೆ ಮತ್ತು ಪೋಷಕಾಂಶ ಮೇವಿನ ನಿರ್ವಹಣೆ ಮಾಡಬೇಕು. ರಾಸುಗಳ ಆರೋಗ್ಯ ನಿರ್ವಹಣೆಯ ಕುರಿತು ರೈತರು ಈ ತರಬೇತಿಯಲ್ಲಿ ನೀಡಲಾಗುವ ಮಾಹಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೈನುಗಾರಿಕೆ ಒಂದು ಪರಿಸರ ಸ್ನೇಹಿ ಕೃಷಿ ಉಪಕಸುಬಾಗಿದ್ದು, ರೈತರ ಆರ್ಥಿಕ ಮಟ್ಟ, ಜನರ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿಯಾಗಿದ್ದು ರೈತರು ಸ್ವಾವಲಂಬನೆಯ ಜೀವನ ನಡೆಸಲು ಅನುಕೂಲಕರವಾಗಿದೆ. ಭಾರತ ದೇಶವು ಇಡೀ ಪ್ರಪಂಚದಲ್ಲಿ ಹಾಲಿನ ಉತ್ಪಾದನೆಯಲ್ಲಿ ಮುಂದಿದೆ. ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್ ರಾಜ್ಯಗಳು ದೇಶದ ಒಟ್ಟು ಹಾಲಿನ ಉತ್ಪಾದನೆಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಹಾಲು ಉತ್ಪಾದಿಸುತ್ತಿವೆ. ಕರ್ನಾಟಕ ರಾಜ್ಯ 9ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ರೈತಪರ ಚಿಂತಕ ಹಾಗೂ ನೀರಾವರಿ ಹೋರಾಟಗಾರ ಕಸವನಹಳ್ಳಿ ರಮೇಶ್ ಮಾತನಾಡಿ, ಹಿಂದೆ ಕೃಷಿಯಲ್ಲಿ ಹಸು ಸಾಕಾಣಿಕೆಯು ಅನಿವಾರ್ಯವಾಗಿತ್ತು. ಹೈನುಗಾರಿಕೆಯು ರೈತರ ಜೀವನ ಮಟ್ಟ ಸುಧಾರಿಸಲು ಆಧಾರವಾಗಿದೆ. ಕೋಲಾರದಲ್ಲಿ ಹಸು ಸಾಕಾಣಿಕೆಯಲ್ಲಿ ಅನುಸರಿಸುವ ವೈಜ್ಞಾನಿಕ ಪದ್ಧತಿ ಮತ್ತು ಅಲ್ಲಿನ ಜನರ ಕೃಷಿಯ ಮೇಲಿನ ಬದ್ಧತೆಯನ್ನು ನೋಡಿ ಜಿಲ್ಲೆಯ ರೈತರು
ಅದನ್ನು ಅನುಸರಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರವೇ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹ

ಹಿರಿಯೂರು ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಾಗರಾಜ್, ಎಮ್ಮೆ ಮತ್ತು ಹಸುಗಳಲ್ಲಿ ಲಾಭದಾಯಕ ಹೈನುಗಾರಿಕೆಗೆ ಉತ್ತಮ ತಳಿ ಆಯ್ಕೆ ಮಾಡಿಕೊಳ್ಳುವ ಹಲವು ಮಾಹಿತಿಯನ್ನು ನೀಡಿದರು. ಗಿಡಕ್ಕೆ ನೀರೆರೆಯುವ ಮೂಲಕ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ,ಸಹಾಯಕ ಕೃಷಿ ನಿರ್ದೇಶಕಿ ಉಷಾರಾಣಿ, ಕೃಷಿ ಅಧಿಕಾರಿ ಪವಿತ್ರಾ,ಎಂ.ಜೆ,ಬಬ್ಬೂರು ಕೇಂದ್ರದ ಸಿಬ್ಬಂದಿ, ರೈತರು ಉಪಸ್ಥಿತರಿದ್ದರು. ವಿವಿಧ ಭಾಗದಿಂದ ಆಗಮಿಸಿದ ರೈತ ಪಶು ಸಾಕಣಿಕೆ ಕುರಿತು ತರಬೇತಿ ಪಡೆದುಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...