ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

Date:

Advertisements

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ ನೋಡಿರಲಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದರು.‌

1002496635

ಇದುವರೆಗೂ ಹವಾಮಾನದ ಕಾರಣದಿಂದ, ಮಳೆಯ ಕಣ್ಣಾಮುಚ್ಚಾಲೆ ಆಟದಿಂದಾಗಿ ಬಿತ್ತನೆ ಕಾರ್ಯ ಕುಂಠಿತವಾಗಿತ್ತು. ಕಳೆದ ತಿಂಗಳು ಜುಲೈ ಅಂತ್ಯದಲ್ಲಿ ಉತ್ತಮ ಮಳೆ ಆರಂಭವಾಗಿದ್ದು ಸಾಕಷ್ಟು ರೈತರು ಬಿತ್ತನೆ ಕಾರ್ಯ ಕೈಗೊಂಡಿದ್ದು ಪ್ರಗತಿಯಲ್ಲಿದೆ.‌ ಜುಲೈ ಕೊನೆಯಲ್ಲಿ ಬಿತ್ತನೆ ಮಾಡಿದ ರೈತರಿಗೆ ಈಗ ರಸಗೊಬ್ಬರ ಯೂರಿಯಾ ಅವಶ್ಯಕತೆ ಇದ್ದು ಸಾಕಷ್ಟು ಯೂರಿಯಾ ದಾಸ್ತಾನು ಇಲ್ಲದ ಕಾರಣ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಗೊಬ್ಬರ ಸಿಗುತ್ತದೋ ಇಲ್ಲವೋ ಎಂದು ಗೊಂದಲ ಉಂಟಾಗಿದೆ ಎಂದು ಸರತಿಯಲ್ಲಿ ನಿಂತು ಕಾಯುತ್ತಿರುವ ರೈತರು ಅಳಲು ತೋಡಿಕೊಂಡರು.

1002496627
ಗೊಬ್ಬರಕ್ಕಾಗಿ ರೈತರ ನೂಕು ನೂಗ್ಗಲು

ಜನತಾ ಬಜಾರ್ ಹಾಗೂ ಇತರೆಡೆ ಅಂಗಡಿಗಳಲ್ಲಿದ್ದ ಅಲ್ಪಸ್ವಲ್ಪ ರಸಗೊಬ್ಬರವನ್ನು ಪೊಲೀಸ್ ಸರ್ಪಗಾವಲಿನಲ್ಲಿ ವಿತರಣೆ ಮಾಡಲಾಯಿತು. ಚಳ್ಳಕೆರೆಯಲ್ಲಿ ಗೊಬ್ಬರ ಕೊರತೆಯಿಂದ ಜನತಾ ಬಜಾರ್ ನಲ್ಲಿ ರೈತರು ಕಾದು ಕುಳಿತಿದ್ದರು.

Advertisements

ಕಳೆದ ಎರಡು ತಿಂಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಎದುರಾಗಿದ್ದು, ತೀವ್ರ ಪ್ರತಿಭಟನೆಗಳು ನಡೆದವು. ಕೆಲವೆಡೆ ರಸ್ತೆ ತಡೆ, ಕೃಷಿ ಇಲಾಖೆಗೆ ಬೀಗ ಜಡಿದು ರೈತ ಮುಖಂಡರು ಬಿಸಿ ಮುಟ್ಟಿಸಿದ್ದರು. ಆಗ ಚಳ್ಳಕೆರೆ ತಾಲೂಕಿನಲ್ಲಿ ಗೊಬ್ಬರದ ಅವಶ್ಯಕತೆ ಇಲ್ಲದೆ ಶಾಂತವಾಗಿತ್ತು. ಜುಲೈನಲ್ಲಿ ಉತ್ತಮ ಹವಾಮಾನ, ಮಳೆ ನಂತರ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಸಮಯದಲ್ಲಿ ಬೆಳೆಗಳಿಗೆ ಬೆಳವಣಿಗೆಗೆ ಪೋಷಕಾಂಶಭರಿತ ಯೂರಿಯಾ ಅಗತ್ಯ ಹೆಚ್ಚು. ಆದರೆ ಸಾಕಷ್ಟು ಗೊಬ್ಬರ ಸರಬರಾಜು ಇಲ್ಲದೇ ಗೊಬ್ಬರ ಅಂಗಡಿ ಮುಂಬಾಗ ರೈತರು ನೂಕುನುಗ್ಗಲು ಎದುರಾಗಿದೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಈ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪತ್ರಕರ್ತ ಮುರಳಿ ಮತ್ತು ಕರವೇ ಮುಖಂಡ ಭೋಜರಾಜ್,”ಇತಿಹಾಸದಲ್ಲಿ ಇದೇ ಮೊದಲು ಗೊಬ್ಬರ ಕೊರತೆ ಚಳ್ಳಕೆರೆ ತಾಲೂಕಿನಲ್ಲಿ ಉಂಟಾಗಿದೆ ಎನ್ನಬಹುದು. ಬೇರೆ ಭಾಗಗಳಲ್ಲಿ ರಸಗೊಬ್ಬರ ಕೊರತೆ ಸುದ್ದಿ ಇದೆ ಎಂದು ಸುದ್ದಿ ಓದುತ್ತಿದ್ದೆವು. ಆದರೆ ಮಂಗಳವಾರ ಬೆಳ್ಳಂಬೆಳಗ್ಗೆ ಗೊಬ್ಬರ ಸಿಗದೇ ರೈತರು ಪರದಾಡುವ, ನೂಕಾಟ, ವಾಗ್ಯುದ್ದ ನಡೆದುದನ್ನು ಕಣ್ಣಾರೆ ಕಂಡಿದ್ದೇವೆ.‌ ರೈತರಿಗೆ ಅಗತ್ಯವಾದ ರಸಗೊಬ್ಬರವನ್ನು ಕೂಡಲೇ ಕೃಷಿ ಇಲಾಖೆ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X