ಚಿತ್ರದುರ್ಗ | ಗ್ರಾಮೀಣ ಪ್ರತಿಭೆಯ “ಉರ್ದು ಕಥನ ಸಾಹಿತ್ಯದಲ್ಲಿ ಸಾಮಾಜಿಕ ಸಂವೇದನೆ”ಗೆ ಹಂಪಿ ವಿವಿಯ ಫೆಲೋ ಶಿಪ್.

Date:

Advertisements

ಕನ್ನಡ ವಿಶ್ವವಿದ್ಯಾಲಯ, ಹಂಪಿಯ 33ನೇ ನುಡಿಹಬ್ಬದ ಘಟಿಕೋತ್ಸವದಲ್ಲಿ ಚಿತ್ರದುರ್ಗ ಜಿಲ್ಲೆ ಮತ್ತು ತಾಲೂಕಿನ ಹಿರೇಕಬ್ಬಿಗೆರೆ ಗ್ರಾಮೀಣ ಪ್ರತಿಭಾವಂತ ಯುವಕ ಸೈಯದ್ ಬಿ. ಅವರ “ಕನ್ನಡಾನುವಾದಿತ ಉರ್ದು ಕಥನ ಸಾಹಿತ್ಯದಲ್ಲಿ ಸಾಮಾಜಿಕ ಸಂವೇದನೆ” ಎಂಬ ಸಂಶೋಧನಾ ಪ್ರಬಂಧಕ್ಕೆ ಫೆಲೋ ಶಿಪ್ ದೊರೆತಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪಿಎಚ್.ಡಿ. ಪದವಿ ಪ್ರಧಾನ ಮಾಡಿದರು.

1001811640

ಚಿತ್ರದುರ್ಗ ತಾಲೂಕಿನ ಹಿರೇಕಬ್ಬಿಗೆರೆ ಗ್ರಾಮದ ರೈತಾಪಿ ಕುಟುಂಬದ ಬಾಬುಸಾಬ್, ದಿಲ್ ಶಾದ್ ದಂಪತಿಗಳ ಮಗ ಸೈಯದ್ ಬಿ ಅವರು ಕನ್ನಡ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ., ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಹಲವಾರು ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರ ಚೊಚ್ಚಲ ವಿಮರ್ಶಾ ಕೃತಿ ‘ಬಯಲು’ ಕರ್ನಾಟಕ ಸರ್ಕಾರ, ಕನ್ನಡ ಪುಸ್ತಕ ಪ್ರಾಧಿಕಾರದಿಂದ 2020ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಯಾಗಿ ಧನ ಸಹಾಯ ಪಡೆದಿದೆ.

‘ಆಧುನಿಕ ಕನ್ನಡ ಸಾಹಿತ್ಯ’ ಎಂಬ ಸಂಪಾದಿತ ಕೃತಿಯನ್ನು ಪ್ರಕಟಿಸಿದ್ದು, 13 ವಿಮರ್ಶೆ, ಸಂಶೋಧನಾ ಲೇಖನಗಳು ಅಂತಾರಾಷ್ಟ್ರೀಯ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯು.ಜಿ.ಸಿ ಜೂನಿಯರ್ ಮತ್ತು ಸೀನಿಯರ್ ಫೆಲೋ ಆಗಿ ಪಿಎಚ್.ಡಿ. ಅಧ್ಯಯನವನ್ನು ಇದೇ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ವಿಠಲರಾವ್ ಟಿ. ಗಾಯಕ್ವಾಡ್ ಅವರ ಮಾರ್ಗದರ್ಶನದಲ್ಲಿ ‘ಕನ್ನಡಾನುವಾದಿತ ಉರ್ದು ಕಥನ ಸಾಹಿತ್ಯದಲ್ಲಿ ಸಾಮಾಜಿಕ ಸಂವೇದನೆ’ ಎಂಬ ಮಹಾ ಪ್ರಬಂಧವನ್ನು ಸಿದ್ಧಪಡಿಸಿ ವಿವಿಗೆ ಸಲ್ಲಿಸಿದ್ದರು.

Advertisements

ಗ್ರಾಮೀಣ ಪ್ರತಿಭೆಯಾದ ಇವರಿಗೆ ಕುಟುಂಬ, ಸ್ನೇಹಿತರು, ಗ್ರಾಮಸ್ಥರು ಹಾಗೂ ಹಲವು ಗಣ್ಯಮಾನ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ...

ಚಿತ್ರದುರ್ಗ | ಬಾಲಕಾರ್ಮಿಕ ಪದ್ಧತಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಕುರಿತು ಶಿಬಿರ

ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ಅರಿವು ಮೂಡಿಸುವ ಶಿಬಿರವನ್ನು ಚಿತ್ರದುರ್ಗ...

ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ...

Download Eedina App Android / iOS

X