ಚಿತ್ರದುರ್ಗ | ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ರೈತ ಸಂಘ ಆಕ್ರೋಶ

Date:

ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದೇ ಸಾರ್ವಜನಿಕರ ಕೆಲಸಕಾರ್ಯಗಳ ನಿರ್ಲಕ್ಷ್ಯ ಧೋರಣೆ, ವಿಳಂಬಕ್ಕೆ ಕಾರಣವಾದ ತಾಲೂಕು ಕಛೇರಿ ಸಿಬ್ಬಂದಿ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆಯ ಹೊಳಲ್ಕೆರೆ ತಾಲೂಕು ಘಟಕದ ಮುಖಂಡರು ಹೊಳಲ್ಕೆರೆ ತಹಶೀಲ್ದಾರ್ ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದೆ.

- Advertisement -
1003570557

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿ ಕಿಡಿಕಾರಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಧ್ಯಕ್ಷ ಈಚಗಟ್ಟದ ಸಿದ್ಧವೀರಪ್ಪ, “ಇಂದು ಬೆಳಗ್ಗೆ 10:30 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿ ಮೂವರು ದ್ವಿತೀಯ ದರ್ಜೆ ಸಹಾಯಕ (ಎಸ್ ಡಿ ಎ) ಮಹಿಳೆಯರು, ರಾಮಗಿರಿ ಉಪತಹಶೀಲ್ದಾರ್ ಅವರನ್ನು ಹೊರತುಪಡಿಸಿ ಬಹುತೇಕ ಸಿಬ್ಬಂದಿಗಳು ಕಚೇರಿಯಲ್ಲಿ ಹಾಜರಿರಲಿಲ್ಲ. ಈ ಸಂದರ್ಭದಲ್ಲಿ10.35 ನಿಮಿಷದವರೆಗೆ ಬಹುತೇಕ ನೌಕರರು, ಅಧಿಕಾರಿಗಳು ಕಛೇರಿಗೆ ಹಾಜರಾಗಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಮಯ ಪಾಲನೆ ಇಲ್ಲದೆ ಮನಸ್ಸಿಗೆ ಬಂದಂತೆ ವರ್ತಿಸುವುದು ಕಂಡುಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...
1003570558

“ಇದೇ ವೇಳೆ ಸಿಬ್ಬಂದಿ ಹಾಜರಾತಿ ಪುಸ್ತಕದಲ್ಲಿ ಗೈರುಹಾಜರಾದ ಬಗ್ಗೆ ದಾಖಲಿಸಲು ತಹಶೀಲ್ದಾರ್ ರವರಿಗೆ ತಿಳಿಸಿ ಗೈರು ಹಾಕಿಸಿರುತ್ತೇವೆ. ಚಿತ್ರದುರ್ಗ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಈ ರೀತಿ ಬೇಜವಾಬ್ದಾರಿಯಾಗಿ ಕೆಲಸ ಮಾಡುವ ನೌಕರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸುತ್ತೇವೆ. ಕಛೇರಿಗೆ ದೂರದ ಊರುಗಳಿಂದ ಅವಶ್ಯಕ ಕೆಲಸಗಳಿಗೆ ಸಾಕಷ್ಟು ಬಾರಿ ರೈತರು, ಸಾರ್ವಜನಿಕರು, ಅಶಕ್ತರು, ಮಹಿಳೆಯರು ಸೇರಿದಂತೆ ಸಾವಿರಾರು ಮಂದಿ ಆಗಮಿಸುತ್ತಾರೆ. ಇವರು ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗದೆ ಇರುವುದು ಕೆಲಸಗಳಲ್ಲಿ ವಿಳಂಬ ಮತ್ತು ದುರ್ವರ್ತನೆ ತೋರಿದಂತೆ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತೆ ಆಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಗಾಂಧಿ ಪೋಟೋ ಇರಿಸದೇ ಕಸಾಪದಿಂದ ಗಣರಾಜ್ಯೋತ್ಸವ ಆಚರಣೆ ಆರೋಪ

ಈ ಸಂದರ್ಭದಲ್ಲಿ ರೈತ ಸಂಘ ಹಾಗೂ ಹಸಿರುಸೇನೆ ಸಂಚಾಲಕ ಪ್ರಸನ್ನಕುಮಾರ್, ತಾಲೂಕು ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್, ಮುಖಂಡರಾದ ಸದಾಶಿವಪ್ಪ, ನಾಗರಾಜ್, ಮಹದೇವಪ್ಪ ಮುಂತಾದವರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...