ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

Date:

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ (MDS) ಪದವಿ ಪರೀಕ್ಷೆಯಲ್ಲಿ ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (C.M.C.R.I) ಹಿರಿಯ ನಿವಾಸಿ ವೈದ್ಯೆ ಡಾ. ಸಾಧನಾ ಎಸ್. ಎಂ. ಅವರು ರಾಜ್ಯಕ್ಕೆ 5ನೇ ರ್ಯಾಂಕ್ ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

- Advertisement -

ನಗರದ ಮೈರಾಡ್ ಸಂಸ್ಥೆಯ ಉದ್ಯೋಗಿ ವೇದಮೂರ್ತಿ ಎಂ.ಎಸ್. ಮತ್ತು ಶ್ರೀಮತಿ ಮಂಗಳಾ ಎಂ. ಅವರ ದ್ವಿತೀಯ ಪುತ್ರಿಯಾದ ಡಾ. ಸಾಧನಾ ಅವರು ಚಿತ್ರದುರ್ಗದ ಪ್ರಸಿದ್ಧ ಎಸ್‌ಜೆಎಂ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಂಡಿಎಸ್ (MDS) ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ (BDS) ಪದವಿ ಪೂರೈಸಿದ್ದು, ಅಲ್ಲಿಯೂ ಸಹ ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಅತ್ಯುತ್ತಮ ಸಾಧನೆ ತೋರಿದ ಡಾ.ಸಾಧನ ಅವರಿಗೆ ಸಿ.ಎಂ.ಸಿ.ಆರ್.ಐ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಬಿ.ವೈ. ಯುವರಾಜ್, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ಚಂದ್ರಿಕಾ ಎನ್., ಡಾ. ಜಿ.ಎಚ್. ಮೇಘಾ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 

ಡಾ. ಸಾಧನಾ ಅವರ ಈ ಸಾಧನೆಯು ಸಂಸ್ಥೆಗೆ ಸಂದ ಗೌರವವಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮೊಳಕಾಲ್ಮೂರಿನಲ್ಲಿ ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹ ; ಜುಲೈ 1ರಂದು ರೈತ ಸಂಘದ ಬೃಹತ್ ಪ್ರತಿಭಟನೆ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್‌ಗಳ (ಗಾಳಿ...

ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ...

ಚಿತ್ರದುರ್ಗ | ಸಚಿವ ಡಿ. ಸುಧಾಕರ್ ನಿಧನ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ...

ಚಿತ್ರದುರ್ಗ | ಒಳಮೀಸಲಾತಿ ಹೋರಾಟಗಾರರ ಸಭೆ: ‘ಜೈಲ್ ಭರೋ’ ಚಳವಳಿಯ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ನೀಡಿದ್ದ ಭರವಸೆಯನ್ನು...