ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಪಠ್ಯಾಧಾರಿತ ಸಾಂಸ್ಕೃತಿಕ ಓದು ಕಾರ್ಯಕ್ರಮ

Date:

Advertisements

ಚಿತ್ರದುರ್ಗದ ವಿವೇಕಾನಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪಠ್ಯಾಧಾರಿತ ಸಾಂಸ್ಕೃತಿಕ ಓದು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಆರ್ಥಿಕ ಯುವಚಿಂತಕ ಡಿ.ಬಸವರಾಜ್ ಮಾತನಾಡಿ “ಹಿರಿಯರ ಮಾರ್ಗದರ್ಶನಗಳು ಮನುಕುಲದ ಭವಿಷ್ಯಕ್ಕೆ ಉತ್ತಮ ಅಡಿಪಾಯವಾಗಿದೆ. ಅವರು ನೆರವೇರಿಸಿಕೊಂಡು ಬಂದ ಆಚಾರ ವಿಚಾರಗಳನ್ನು ನಾವೆಂದಿಗೂ ಮರೆಯಬಾರದು. ಪ್ರಬುದ್ಧಮಾನಕ್ಕೆ ಬಂದ ಇಂದಿನ ಯುವಪೀಳಿಗೆ ಬಹುತೇಕ ಸರ್ಕಾರಿ ಶಾಲೆಗಳಿಂದ ಬಂದವರೇ ಆಗಿದ್ದಾರೆ. ಅಂಥವರು ಸಮಾಜದ ಯಾವುದೇ ಸ್ಥಾನದಲ್ಲಿದ್ದರೂ ಸರ್ಕಾರಿ ಶಾಲಾ ಮಕ್ಕಳ ಮೂಲಸೌಕರ್ಯಗಳತ್ತ ಗಮನಹರಿಸಬೇಕು. ಸರ್ಕಾರಿ ಶಾಲಾಮಕ್ಕಳ ಪೋಷಕರು ಕೂಲಿನಾಲಿ ಮಾಡಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಶ್ರಮಿಸುತ್ತಾರೆ. ಆ ಪೋಷಕರ ಶ್ರಮಕ್ಕೆ ಮಕ್ಕಳೂ ಸಹ ತಕ್ಕ ಪ್ರತಿಫಲವನ್ನು ನೀಡಬೇಕು” ಎಂದು ಕರೆ ನೀಡಿದರು.

1002605301

“ಇಂದಿಗೂ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಕಾಂಪೌಂಡು, ಪಾಠೋಪಕರಣಗಳು ಮತ್ತು ಪೀಠೋಪಕರಣಗಳ ಅವಶ್ಯಕತೆಯಿದೆ. ಮುಗ್ಧ ಮಕ್ಕಳ ಅವಶ್ಯಕತೆಗಳನ್ನು ಪೂರೈಸಬೇಕು. ದೊಡ್ಡಪೇಟೆಯ ಗಲ್ಲಿಯೊಂದಕ್ಕೆ ನಮ್ಮ ತಂದೆಯವರ ಬಿ.ದೇವರಾಜ ರಸ್ತೆ ಎಂದು ಹೆಸರಿಟ್ಟಿದ್ದಾರೆ. ಅವರ ಹೆಸರಲ್ಲಿ ನಗರದಲ್ಲಿ ನಿರಂತರವಾಗಿ ಉಪಯುಕ್ತ ಕಾರ್ಯಕ್ರಮಗಳನ್ನು ನಡೆಸಲು ಉತ್ಸುಕರಾಗಿದ್ದೇವೆ. ಇದಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡಬೇಕು” ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ “ಅವರು ಕನ್ನಡನಾಡಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಜಗತ್ತನ್ನು ಮಕ್ಕಳಿಗೆ ತಿಳಿಸಬೇಕು. ಶಾಲಾ ಮಕ್ಕಳ ಪಠ್ಯಗಳನ್ನು ಆಧರಿಸಿ ಗದ್ಯ ಮತ್ತು ಪದ್ಯಗಳನ್ನು ಸಾಂಸ್ಕೃತಿಕವಾಗಿ ಪರಿಚಯಿಸುತ್ತಿರುವುದು ಹೆಚ್ಚು ಅರ್ಥಪೂರ್ಣವಾಗಿದೆ. ಇಂದಿನ ಈ ಕಾರ್ಯಕ್ರಮದ ರೂಪುರೇಷೆಗಳು ಪ್ರತಿ ಸರ್ಕಾರಿ ಶಾಲೆಗಳಲ್ಲಿ ಕಾರ್ಯಗತವಾಗಬೇಕು” ಎಂದರು.

1002605302

ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಮಾತನಾಡಿ “ನಗರದ ಬಹುತೇಕ ರಸ್ತೆಗಳಿಗೆ ಗಣ್ಯವ್ಯಕ್ತಿಗಳ ಹೆಸರಿಟ್ಟಿದ್ದಾರೆ. ಅವರ ಆದರ್ಶ ಮತ್ತು ಆಶೋತ್ತರಗಳನ್ನು ದೇಶ ಕಟ್ಟುವ ಭವಿಷ್ಯದ ಪೀಳಿಗೆಗೆ ಪಠ್ಯದ ಜೊತೆಗೆ ಪರಿಚಯಿಸಿದರೆ ಬೋಧನೆ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಂಬೇಡ್ಕರರ ದಲಿತರ ಮಹಾಡ್ ಹೋರಾಟವನ್ನು ಪತ್ರಿಕೆಗಳು ದ್ರೋಹ ಎಂದಿದ್ಧವು; ಡಿ ಉಮಾಪತಿ

ಮುಖ್ಯ ಅತಿಥಿಗಳಾಗಿ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಟಿ.ಷಣ್ಮುಖಪ್ಪ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಬಿ.ವಿಮಲಾಕ್ಷಿ, ಯೋಗ ಚಿಕಿತ್ಸಕ ಎಂ.ಬಿ.ಮುರುಳಿ, ಆಯುರ್ವೇದ ತಜ್ಞವೈದ್ಯ ಡಾ.ಲಿಂಗದೊರೆ, ಜಿ.ಎಂ.ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವರುಣ್, ಉದ್ಯಮಿ ಜಿ.ಎಂ.ಮಂಜುನಾಥ್, ಸಹಶಿಕ್ಷಕರಾದ ಪಿ.ಬಿ.ಅನುಸೂಯ, ಟಿ.ಎನ್.ಶೋಭ ಸೇರಿದಂತೆ ಶಾಲಾ ಮಕ್ಕಳು ಸಮಾಜದಲ್ಲಿ ಉಪಸ್ಥಿತರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X