ಚಿತ್ರದುರ್ಗ | ಚಳ್ಳಕೆರೆ, ಗೋಸಿಕೆರೆ ಸೇರಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಆಚರಣೆಯ ಸಡಗರ

Date:

Advertisements

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು.

ಮೊಹರಂ 1

ಕಳೆದ ಮೂರು ದಿನಗಳ ಹಿಂದೆಯೇ ಪ್ರಾರಂಭವಾಗಿರುವ ಮೊಹರಂ ಹಬ್ಬವನ್ನು ಸೋಮವಾರದವರೆಗೆ ಐದು ದಿನಗಳು ಆಚರಿಸುವ ಸಂಪ್ರದಾಯವಿದ್ದು, ಮೊಹರಂ ಅನ್ನು ಪೀರ ದೇವರ ಹಬ್ಬ ಎಂದು ಕೂಡ ಈ ಭಾಗದಲ್ಲಿ ಕರೆಯುತ್ತಾರೆ. ಪೀರ ದೇವರು, ಅಲಿ, ಲಾಲ್, ಚಾಂದ್, ಹುಸೇನ್ ಸೇರಿದಂತೆ ಐದು ದೇವರುಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆಯನ್ನು ಕೂಡ ಮಾಡುವುದು ಭಾವೈಕ್ಯತೆ ಹಬ್ಬ ಮೊಹರಂ ವಿಶೇಷವಾಗಿದ್ದು, ಇದರಲ್ಲಿ ಯಾವುದೇ ಅಡೆತಡೆ ಇಲ್ಲದೆ ಹಿಂದು ಮುಸ್ಲಿಮರು ಭಾವೈಕ್ಯತೆಯಿಂದ ಪಾಲ್ಗೊಂಡು ಭಕ್ತಿ ಸಮರ್ಪಿಸುತ್ತಾರೆ.

1002265769

ಅಲಾಯಿ ಕುಣಿಯನ್ನು ಮಾಡಿ ಅದರ ಸುತ್ತ ದೇವರೊಂದಿಗೆ ಭಕ್ತರು ಪ್ರದಕ್ಷಿಣೆ ಹಾಕಿ ದೇವರಿಗೆ ಭಕ್ತಿ ಸಲ್ಲಿಸಿ ಬೇಡಿಕೊಳ್ಳುವುದು ವಾಡಿಕೆ. ಶನಿವಾರ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮದಲ್ಲಿ ಅಲಾಯಿ ಕುಣಿ ಮಾಡಿ ಅದರ ಸುತ್ತ ಪ್ರದಕ್ಷಿಣೆ ಹಾಕಿ ಸಾವಿರಾರು ಭಕ್ತರು ಪ್ರೀತಿ ಸಮರ್ಪಿಸಿದರು. ಕಷ್ಟಗಳನ್ನು ಸುಡುವ ಪ್ರತೀಕವಾಗಿ ಅಲಾಯಿ ಕುಣಿಗೆ ಬೆಂಕಿಯನ್ನು ಹಾಕಿ ಅದರ ಸುತ್ತ ಕಷ್ಟಗಳನ್ನು ಕಳೆಯಲೆಂದು ಬೇಡಿಕೆ ಈಡೇರಿಕೆಗೆ ಪ್ರದಕ್ಷಿಣೆ ಹಾಕುತ್ತಾ ಭಕ್ತಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ದಾವಣಗೆರೆ ಮುಸ್ಲಿಂ ಒಕ್ಕೂಟ ಮಾನವ ಸರಪಳಿ ರಚಿಸಿ ಫ್ರತಿಭಟನೆ

ಅಲ್ಲದೆ ಹೊಳಲ್ಕೆರೆ ತಾಲೂಕಿನ ಬಿದುರ್ಗ, ಚಿಕ್ಕಜಾಜೂರು, ಹೊಸದುರ್ಗ ತಾಲೂಕಿನ ಜಾನಕಲ್ಲು,
ಹಿರಿಯೂರು ತಾಲೂಕಿನ ಹಲವು ಗ್ರಾಮಗಳು ಸೇರಿದಂತೆ ಹಲವೆಡೆ ಮೊಹರಂ ಹಬ್ಬವನ್ನು ವಿಶೇಷವಾಗಿ ಭಾವೈಕ್ಯತೆಯಿಂದ ಆಚರಿಸಲಾಗುತ್ತದೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X