ಚಿತ್ರದುರ್ಗ | ಸದೃಢ ಭಾರತಕ್ಕೆ ಯುವಜನರೇ ಶಕ್ತಿ – ಯುವ ಸಮಾಲೋಚಕ ಹರ್ಷವರ್ಧನ

Date:

Advertisements

ದೇಶದ ನಿಜವಾದ ಸಂಪತ್ತು ಯುವಕರು ಹಾಗಾಗಿ ಯುವಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹೆಚ್ಚು ಶಕ್ತಿ ಹೊಂದಬೇಕು. ಸದೃಢ ಭಾರತಕ್ಕೆ ಯುವಜನತೆಯೇ ಶಕ್ತಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದ ಯುವಸಮಾಲೋಚಕ ಹರ್ಷವರ್ಧನ್ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಚಿತ್ರಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್ ಎಸ್. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ತರಬೇತಿ ಮೂಲಕ ಮಾಹಿತಿಯನ್ನು ತಿಳಿಸಿದರು.

“ಜೊತೆಗೆ ಯುವಜನತೆಗೆ ಸುರಕ್ಷತೆಯ ಬಗ್ಗೆ ಗಮನವಿರಬೇಕು ಹಾಗೆ ಇತ್ತೀಚೆಗೆ ಯುವಜನತೆ ಲೈಂಗಿತೆಯ ಬಗ್ಗೆ ಹೆಚ್ಚು ಜ್ಞಾನವನ್ನು ಹೊಂದಿರಬೇಕು. ಜೊತೆಗೆ ನಮ್ಮ ಭವಿಷ್ಯದ ಜೀವನಕ್ಕಾಗಿ ಇಂದು ಉತ್ತಮವಾದ ಮಾರ್ಗದರ್ಶನ ಪಡೆದು ವೃತ್ತಿಯ ಆಯ್ಕೆಗೆ ಅವಕಾಶ ಪಡೆಯುವಂತರಾಗಬೇಕು. ಆರೋಗ್ಯ ಮತ್ತು ಜೀವನ ಶೈಲಿ ಯುವಕರ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಯುವ ಜನತೆ ಹೆಚ್ಚು ದೈಹಿಕ ಚಟುವಟಿಕೆಗಳಿಗೆ ಗಮನ ಕೊಡಬೇಕು” ಎಂದು ಅಭಿಪ್ರಾಯಪಟ್ಟರು.

1002143401

“ಮೊಬೈಲ್ ಬಳಕೆ ಕಡಿಮೆ ಮಾಡಿ ಮನುಷ್ಯರ ಜೊತೆ ಮನಸ್ಸಿಂದ ಮುಕ್ತವಾಗಿ ಮಾತನಾಡಿ ಹೆಚ್ಚು ಕ್ರಿಯಾಶೀಲವಾಗಿ ಸಬಲೀಕರಣದತ್ತ ಮುಂದುವರಿಯಬೇಕು. ಹಾಗೆ ನಮ್ಮ ಆತ್ಮೀಯರೊಟ್ಟಿಗೆ ನಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಪ್ರಯತ್ನ ಮಾಡಬೇಕು ಹಾಗೆ ಈ ಎಲ್ಲಾ ಅಂಶಗಳಿಂದ ಸದೃಡ ಯುವಕನಾಗಲು ಸಾಧ್ಯ” ಎಂದು ಮಾಹಿತಿ ನೀಡಿದರು.

ಶಿಬಿರದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಮೋಹನ್ ಮಾತನಾಡಿ “ವಿದ್ಯಾರ್ಥಿಗಳು ದೇಶದ ಯುವಶಕ್ತಿ ಪ್ರೇರಣೆಗೆ ಜೀವನ ಕೌಶಲ್ಯ ತರಬೇತಿ ತುಂಬಾ ಹೆಚ್ಚು ಪರಿಣಾಮ ಬೀರುವ ತರಬೇತಿಯಾಗಿದೆ. ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ, ಆಯ್ಕೆ ನಿಮ್ಮದು” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಎನ್ ಎಸ್ ಎಸ್ ಅಧಿಕಾರಿಗಳಾದ ಮಂಜುನಾಥನಾಯ್ಕ್ ಹಾಗೂ ಪ್ರಾಧ್ಯಾಪಕರಾದ ರಮ್ಯ, ಹಾಗೂ ಯುವ ಪರಿವರ್ತಕಿಯರಾದ ಅಂಜಲಿ, ಮೇಘ, ಸುಷ್ಮಾ ಕಾಲೇಜಿನ ಬೋದಕ ಮತ್ತು ಬೋದಕೇತರ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X