ಚಿತ್ರದುರ್ಗ | ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ; ನಗರಸಭೆ ಸದಸ್ಯರು ಸೇರಿ 16 ಮಂದಿ ಬಂಧನ

Date:

ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ ಆಡುತ್ತಿದ್ದರೆಂಬ ಆರೋಪದ ಮೇಲೆ ನಗರಸಭೆಯ ಮೂವರು ಸದಸ್ಯರು ಸೇರಿ 16 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸಪುರ ಸರ್ಕಾರಿ ಅತಿಥಿ ಗೃಹದಲ್ಲಿ ಹಿರಿಯೂರು ನಗರಸಭೆ ಸದಸ್ಯರಾದ ಜಗದೀಶ್, ಅಜ್ಜಪ್ಪ ಹಾಗೂ ಅನಿಲ್ ಕುಮಾರ್ ಸೇರಿದಂತೆ 16 ಮಂದಿ ಜೂಜು ಆಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಅತಿಥಿ ಗೃಹದಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಜೂಜಾಟ ಆಡುತ್ತಿದ್ದ ಎಲ್ಲರನ್ನೂ ಬಂಧಿಸಲಾಗಿದೆ. ಅವರೆಲ್ಲರಿಂದ ಒಟ್ಟು 4.3 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೂಜಾಟದಲ್ಲಿ ಅತಿಥಿ ಗೃಹದ ಸಿಬ್ಬಂದಿ ನಾಸಿರ್ ಕೂಡ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ. ಮೂವರು ನಗರಸಭೆ ಸದಸ್ಯರು, ನಾಸಿರ್ ಹಾಗೂ ಎಚ್ ಧನರಾಜ್, ರಾಜಪ್ಪ, ಕೆ.ಎಂ ಕೊಟ್ಟಿಗೆ ಬಾಬು, ಟಿ.ಮಂಜುನಾಥ್, ಮಾರುತಿ, ಮುದಿಯಣ್ಣ, ಕಬಡ್ಡಿ ರವಿ, ಚಿತ್ರಲಿಂಗೇಶ್, ಕೆ.ಮಂಜುನಾಥ್ ಯಾದವ್, ಟಿ.ಕೆ.ಚಿಕ್ಕಣ್ಣ, ಓಂಕಾರೇಶ್ವರ, ಮಣಿಕಂಠ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...