ಅವರೇ ಪಾದಯಾತ್ರೆ ಮಾಡಿ, ಅವರೇ ನೀರು ಬಿಟ್ಟಿದ್ದಾರೆ, ಡಿಕೆ ಶಿವಕುಮಾರ್‌ದು ನವರಂಗಿ ಆಟ: ಸಿಟಿ ರವಿ ಕಿಡಿ

Date:

Advertisements
  • ‘ಡಿಕೆಶಿ ಕೈಯಲ್ಲಿ ಅಧಿಕಾರ ಇದೆ, ಬದ್ಧತೆ ತೋರಿಸಲಿ’
  • ಸ್ಟಾಲಿನ್‌ ಸ್ನೇಹಕ್ಕೆ ರಾಜ್ಯ ಬಲಿಯಾಗುತ್ತಿದೆ: ಟೀಕೆ

ಡಿಕೆ ಶಿವಕುಮಾರ್‌ ನವರಂಗಿ ಆಟ ಆಡುತ್ತಿದ್ದಾರೆ ಹೊರತು ಬಿಜೆಪಿಯಲ್ಲ. ಅವರೇ ಪಾದಯಾತ್ರೆ ಮಾಡಿ, ಅವರೇ ನೀರು ಬಿಟ್ಟಿದ್ದಾರೆ. ಆಟ ಯಾರದ್ದು ಎಂದು ಮಾಜಿ ಸಚಿವ ಸಿ ಟಿ ರವಿ ಪ್ರಶ್ನಿಸಿದರು.

ಮಂಡ್ಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಅವರ ಕೈಯಲ್ಲಿ ಅಧಿಕಾರ ಇದೆ. ಬದ್ಧತೆಯನ್ನು ನೀರು ಬಿಡುವ ಮೂಲಕ ಅಲ್ಲ ತೋರಿಸೋದು. ಇದಕ್ಕೆ ನವರಂಗಿ ಅಂತ ಕರೀತೀರೋ? ಅಥವಾ ಏನು ಕರೆಯುತ್ತೀರಿ ನೀವೇ ಹೇಳಿ. ಬಣ್ಣ ಬದಲಾಯಿಸೋದು ತಾನೆ ಇದು. ಇದಕ್ಕೆ ತಾನೇ ನವರಂಗಿ ಅಂತ ಕರೆಯಬೇಕಾಗಿರೋದು” ಎಂದು ಟೀಕಿಸಿದರು.

“ಮಂಡ್ಯದ ಜನರಿಗೆ ನೀವು ಮಾಡುತ್ತಿರುವುದು ಏನು? ಮಂಡ್ಯದಲ್ಲಿ ಜನ ನಿಮಗೆ ಹೆಚ್ವು ಸ್ಥಾನ ಕೊಟ್ಟಿದ್ದಾರೆ. ಕೋರ್ಟ್‌ಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಬೇಕು. ಆ ಕೆಲಸವನ್ನು ಇವರು ಮಾಡಿದ್ದಾರಾ?” ಎಂದು ವಾಗ್ದಾಳಿ ನಡೆಸಿದರು.

Advertisements

“ಕಾವೇರಿ ವಿವಾದ ಇವತ್ತು ನೆನ್ನೆಯದಲ್ಲ. ಅದಕ್ಕೆ ಶತಮಾನದ ಇತಿಹಾಸ ಇದೆ. ಚುನಾವಣೆಗೂ‌ ಮುಂಚೆ ಕಾಂಗ್ರೆಸ್ ಮುಖಂಡರು, ಡಿಕೆಶಿ ಸೇರಿ ಎಲ್ಲರೂ ಪಾದಯಾತ್ರೆ ಮಾಡಿದರು. ರೈತರು ಅಂದರೆ ಎಲ್ಲರೂ ಒಂದೆ. ಕರ್ನಾಟಕ-ತಮಿಳುನಾಡು ಎನ್ನುವ ಭೇದಭಾವ ಇಲ್ಲ. ಆದರೆ ಸಂಕಷ್ಟ ಇದ್ದಾಗ ಸೂತ್ರದ ಅನುಗುಣವಾಗಿ ನೀರಿನ ವಿಚಾರ ವ್ಯವಹಾರ ಮಾಡಬೇಕು” ಎಂದು ತಿಳಿಸಿದರು.

“ಮಕ್ಕಳು ಅತ್ತಾಗ ಮಾತ್ರ ತಾಯಿ ಹಾಲು ಕೊಡೋದು. ಆದರೆ, ತಮಿಳುನಾಡು ನೀರು ಕೇಳುವ ಮುಂಚೆಯೇ ನೀರು ಬಿಟ್ಟಿದ್ದೀರಿ. ಕಾವೇರಿ ಕರ್ನಾಟಕದ ಸ್ವಾಭಿಮಾನದ ಪ್ರತೀಕ ಮಾತ್ರವಲ್ಲ ಜೀವನಾಡಿ. ಮಂಡ್ಯ, ಮೈಸೂರು ಭಾಗದ ರೈತರ ಬದುಕನ್ನು ಹಸನು ಮಾಡಿದೆ. ಕಾವೇರಿ ಇಲ್ಲದೇ ಬೆಂಗಳೂರು ಉಳಿಯಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಸ್ಟಾಲಿನ್ ಸ್ನೇಹಕ್ಕೆ ರಾಜ್ಯ ಬಲಿ

I.N.D.I.A ಮೈತ್ರಿಗೋಸ್ಕರ ನೀರು ಬಿಡಲಾಗಿದೆ. ಕಾಂಗ್ರೆಸ್ ನೀತಿಯಿಂದ ಮಂಡ್ಯ ಜನರಿಗೆ ಶಾಪ, ತಮಿಳುನಾಡಿಗೆ ವರ ಆಗಿದೆ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ. ನಿಮ್ಮ ಸ್ಟಾಲಿನ್‌ ಸ್ನೇಹಕ್ಕೆ ರಾಜ್ಯ ಬಲಿಯಾಗುತ್ತಿದೆ ಎಂದು ಹರಿಹಾಯ್ದರು.

“ಸಂಕಷ್ಟದ ಸೂತ್ರ ಬದಿಗೊತ್ತಿ ರಾಜಕೀಯ ಮಾಡಲಾಗುತ್ತಿದೆ. ನಾಳೆ ಸರ್ವಪಕ್ಷಗಳ ಸಭೆ ಮಾಡುತ್ತಿದ್ದಾರೆ. ಅವರ ಪಾಪಕ್ಕೆ ಸೀಲ್ ಹಾಕಿಸಿಕೊಳ್ಳಲು ಹೇಗೂ ಒಂದಷ್ಟು ಜನ ಹೊಗಳುಭಟರು ಇದ್ದಾರೆ. ಅವರ ಬಳಿ ಸೀಲ್ ಹಾಕಿಸಿಕೊಳ್ಳಲು ಈ ಸಭೆ. ಈಗಾಗಲೇ ತಮಿಳುನಾಡಿಗೆ ನೀರು ಬಿಟ್ಟು ಈಗ ಸಭೆ ಮಾಡಿದರೆ ಏನು ಪ್ರಯೋಜನ?” ಎಂದು ಕಿಡಿಕಾರಿದರು.

ಎಸ್‌ ಟಿ ಸೋಮಶೇಖರ್ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿ, “ಎಸ್‌ ಟಿ ಸೋಮಶೇಖರ್ ಅವರನ್ನು ಕಾಂಗ್ರೆಸ್ ನವರು ಸಂಪರ್ಕ ಮಾಡಿರುವುದು ನಿಜ. ಆದರೆ, ಸೋಮಶೇಖರ್ ಅವರು ಬಿಜೆಪಿ ಬಿಡಲ್ಲ ಎಂದಿದ್ದಾರೆ. ಕಾಂಗ್ರೆಸ್‌ನವರಿಗೆ 136 ಸ್ಥಾನ ಸಿಕ್ಕರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಇದರ ಮೇಲೆ ಯೋಚನೆ ಮಾಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X