ಮೈಸೂರು | ದಸರಾಕ್ಕೆ ಬಂದಿದ್ದ ಆನೆಗಳ ನಡುವೆ ಗುದ್ದಾಟ: ದಿಕ್ಕಾಪಾಲಾಗಿ ಓಡಿದ ಜನ!

Date:

Advertisements

ನಾಡಹಬ್ಬ ದಸರೆಗೆಂದು ಬಂದಿದ್ದ ಎರಡು ಆನೆಗಳ ನಡುವೆ ಗುದ್ದಾಟ ನಡೆದಿದ್ದರಿಂದ ಆತಂಕ ಸೃಷ್ಟಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ದಸರಾಕ್ಕೆಂದು ಬಂದಿದ್ದ ಧನಂಜಯ ಹಾಗೂ ಕಂಜನ್ ಎಂಬ ಆನೆಗಳ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್ ಆನೆಯ ಮೇಲೆ ಕುಳಿತಿದ್ದ ಮಾವುತ ಕೆಳಕ್ಕೆ ಬಿದ್ದಿದ್ದಾನೆ‌.

ಮೈಸೂರು ಅರಮನೆಯ ಆವರಣದಿಂದ ಹೊರಕ್ಕೆ ಓಡಿ ಬಂದ ಕಂಜನ್ ಹಾಗೂ ಧನಂಜಯ ಆನೆಗಳು, ನೋಡನೋಡುತ್ತಿದ್ದಂತೆಯೇ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿತು.

Advertisements

ಮಾವುತನನ್ನ ಕೆಳಕ್ಕೆ ಬೀಳಿಸಿ ಹೊರಕ್ಕೆ ಬಂದಿದ್ದ ಕಂಜನ್ ಆನೆಯನ್ನು ನಿಯಂತ್ರಿಸಲು‌ ಹರಸಾಹಸ ಪಟ್ಟು, ಕೊನೆಗೆ ನಿಯಂತ್ರಣ ಸಾಧಿಸಲು ಸಾಧ್ಯವಾಯಿತು. ಆನೆಗಳ ಜಗಳ ಕಂಡವರು ದಿಕ್ಕಾಪಾಲಾಗಿ ಓಡಿದ್ದಾರೆ.

ಅರಮನೆಯ ಜಯಮಾರ್ತಾಂಡ‌ ದ್ವಾರದ‌ ಮೂಲಕ ಹೊರಗಡೆ ಬಂದ ಆನೆಗಳು, ರಸ್ತೆಯ ಕಡೆಗೆ ಓಡಿತು.

ಮಾವುತ- ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ‌ ಬ್ರೇಕ್ ಹಾಕಲಾಯಿತು. ಬಳಿಕ ಆನೆಗಳನ್ನು ಅರಮನೆಗೆ ಕರೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಸದ್ಯ ಎರಡೂ ಆನೆಗಳನ್ನು ಕೋಡಿ‌ಸೋಮೇಶ್ವರ ದೇವಸ್ಥಾನ ಸಮೀಪ ಕಟ್ಟಿ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಆನೆಗಳ ಜಗಳದ ವೀಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ದಸರಾ ಸಿದ್ಧತೆಯ ನಡುವೆ ಈ ರೀತಿಯ ಬೆಳವಣಿಗೆ ಆಗಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X