ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Date:

Advertisements
  • ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರು
  • ಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದಾಗ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಕಾರ್ಯಕರ್ತರು ಮತ್ತು ಬಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಕೇಸರಿ ಶಾಲು ಧರಿಸಿ ಮತದಾನಕ್ಕೆ ಮುಂದಾಗಿದ್ದರಿಂದ ಹೆನ್ನಲಿ ಗ್ರಾಮದ ಬಜರಂಗದಳದ ಕಾರ್ಯಕರ್ತರನ್ನು ತಡೆದು, ಯಾವುದೇ ರೀತಿಯ ಶಾಲನ್ನು ಹಾಕದೆ ಮತದಾನ ಮಾಡುವಂತೆ ಸೂಚನೆ ನೀಡಿದರು. ಬಜರಂಗದಳ ಕಾರ್ಯಕರ್ತರು ಅದಕ್ಕೆ ಒಪ್ಪದಿದ್ದಾಗ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆಯಿತು.

ಸಕಲೇಶಪುರ

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿಯೂ ಆಗಿರುವ ಅನ್ಮೋಲ್ ಜೈನ್ ಹಾಗೂ ಎಎಸ್‌ಪಿ ಮಿಥುನ್ ರೈ ಮತಗಟ್ಟೆಗೆ ಭೇಟಿ ನೀಡಿ ಸಮಸ್ಯೆ ತಿಳಿಗೊಳಿಸಿದರು.

Advertisements

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ವಕೀಲ ಹಾಗೂ ದಲಿತ ಮುಖಂಡ ಎಂ ಆರ್‌ ವೇಣು ಹೆನ್ನಲಿ ಬೂತ್‌ಗೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಗೌರವಾಧ್ಯಕ್ಷ ಶಾಂತರಾಜ್ ಹೆನ್ನಲಿ, ಸಮಿತಿಯ ಅಧ್ಯಕ್ಷ ಗೋಪಾಲ್ ಮಳಲಿ, ವೆಂಕಟೇಶ್, ಶಶಿಕುಮಾರ್, ದಿನೇಶ್ ಗೌಡ, ಈರೇಶ್, ದಿನೇಶ್ ಹಾಗೂ ಹೆನ್ನಲಿ ಗ್ರಾಮಸ್ಥರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X