ನಾಳೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವೆ: ಸಿಎಂ ಸಿದ್ದರಾಮಯ್ಯ

Date:

  • ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ
  • ಕೇಂದ್ರದಿಂದ ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮ ಸಲ್ಲದು

ಬುಧವಾರ (ಜೂ.21) ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡುತ್ತಿದ್ದು, ಮುಖ್ಯಮಂತ್ರಿಯಾದ ನಂತರ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ ಇದಾಗಿದೆ. ಭೇಟಿ ನಂತರ ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಲಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

- Advertisement -

ಮಂಗಳವಾರ ವಿಧಾನ ಪರಿಷತ್ತಿನ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ‌ ಅವರು ಮಾಧ್ಯಮದವರೊಂದಿಗೆ ಮಾತನಾಡಿ, “ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಛತ್ತೀಸಗಢ ರಾಜ್ಯದೊಂದಿಗೆ ಅಕ್ಕಿ ಖರೀದಿ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಬೇಕಾಗಿದೆ. ಛತ್ತೀಸಗಢದಿಂದ ಅಕ್ಕಿ ಖರೀದಿಸಿದರೆ ಸಾಗಾಣಿಕೆಯೂ ಸೇರಿ, ಎಫ್‌ಸಿಐಗಿಂತ ದರ ಹೆಚ್ಚಾಗುತ್ತದೆ. ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲವೆಂದು ತಿಳಿಸಿದ್ದು, ಆಂಧ್ರಪ್ರದೇಶದೊಂದಿಗೆ ನಮ್ಮ ರಾಜ್ಯದ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಡವರ ವಿರೋಧಿ ಕ್ರಮ

“ಭಾರತ ಸರ್ಕಾರದ ಮೂರು ಸಂಸ್ಥೆಗಳಾದ ಎನ್‌ಸಿಎಫ್‌, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕರೆಯಲಾಗಿದೆ. ಅಕ್ಕಿ ಖರೀದಿ ಬಗ್ಗೆ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿದ್ದು, ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯಕ್ಕೆ ಸರಬರಾಜು ಮಾಡಲಾಗುವುದು ಎಂದು ಜೂನ್ 12 ರಂದು ತಿಳಿಸಿದ್ದರು. ಇದಾದ ನಂತರ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ಹಸ್ತಕ್ಷೇಪ ಮಾಡಿ ಜೂನ್ 13 ರಂದು ಎಫ್‌ಸಿಐ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಪತ್ರ ಬರೆದು ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ನಮಗೆ ಪತ್ರ ಬರೆದು ಅಕ್ಕಿ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದು ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮವಲ್ಲವೇ” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ?

ದ್ವೇಷದ ರಾಜಕಾರಣ ಮಾಡುವ ಇವರಿಗೆ ಮಾನವೀಯತೆ ಇದೆಯೇ? ಹಣ ನೀಡಿ ಅಕ್ಕಿ ಪಡೆಯುತ್ತೇವೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ? ಎಂದು ಕಿಡಿ ಕಾರಿದರು.

“ಇದೊಂದು ಪ್ರಜಾಪ್ರಭುತ್ವದ ವ್ಯವಸ್ಥೆ, ಒಕ್ಕೂಟ ರಚನೆಯನ್ನು ಹೊಂದಿದ್ದೇವೆ. ಕೇಂದ್ರ ಸರ್ಕಾರ ಭತ್ತ ಬೆಳೆಯುತ್ತದೆಯೇ? ಎಲ್ಲೆಲ್ಲಿ ಭತ್ತ ಬೆಳೆಯುತ್ತಾರೋ ಅಲ್ಲಿಂದ ಅಕ್ಕಿಯನ್ನು ಪಡೆಯುತ್ತಾರೆ. ಮಾತೆತ್ತಿದರೆ ಆಹಾರ ಭದ್ರತಾ ಕಾಯ್ದೆ ಎನ್ನುವ ಕೇಂದ್ರ ಸರ್ಕಾರ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯುಪಿಎ ಸರ್ಕಾರದಲ್ಲಿ ಮನ್ ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ” ಎಂದರು.

ಮೂವರು ಗೆಲ್ಲುತ್ತಾರೆ

ವಿಧಾನ ಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್‌ ಎಸ್‌ ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....