ಜನರ ಸಮಸ್ಯೆಗೆ ಅಧಿಕಾರಿಗಳಿಂದ ಉಡಾಫೆ ಸಲ್ಲದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

  • ದಾವಣಗೆರೆ ಜಿಲ್ಲಾ ಪಂಚಾಯತ್‌ನಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ
  • ಜನಪ್ರತಿನಿಧಿಗಳಿಗೆ ವಿಳಂಬ ಮಾಡದೇ ಅಧಿಕಾರಿಗಳು ಸ್ಪಂದಿಸಬೇಕು: ಸೂಚನೆ

ಯಾವುದೇ ಅಧಿಕಾರಿಗಳು ಜನರ ಸಮಸ್ಯೆಗಳ ಬಗ್ಗೆ ಉಡಾಫೆ ತೋರಿಸಿದರೆ ಅಂತಹ ಅಧಿಕಾರಿಗಳಿಗೆ ನಮ್ಮ ಸರ್ಕಾರದಲ್ಲಿ ಜಾಗವಿಲ್ಲ. ಜನರು ಬದಲಾವಣೆ ಬಯಸಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ದಾವಣಗೆರೆ ಜಿಲ್ಲಾ ಪಂಚಾಯತ್‌ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, “ಜನಪ್ರತಿನಿಧಿಗಳಿಗೆ ವಿಳಂಬ ಮಾಡದೇ ಅಧಿಕಾರಿಗಳು ಸ್ಪಂದಿಸಬೇಕು. ಒಂದು ವೇಳೆ ವಿಳಂಬ ಮಾಡಿದರೆ ಅದು ಒಂದು ರೀತಿಯಲ್ಲಿ ಭ್ರಷ್ಟಾಚಾರಕ್ಕೆ ಸಮ. ಅಧಿಕಾರಿಗಳಿಂದ ಇಂತಹ ತಪ್ಪು ಆಗಬಾರದು” ಎಂದು ಎಚ್ಚರಿಸಿದರು.

ತಹಶೀಲ್ದಾರ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತಹಶೀಲ್ದಾರ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚಿದೆ‌. ಕಂದಾಯ, ಕೃಷಿ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗೆ ಬರುವ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಹಾಗೂ ಹೋಬಳಿ‌ ಮಟ್ಟಕ್ಕೆ ಭೇಟಿ ನೀಡಬೇಕು. ಯಾವುದೇ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ ಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಯ ಬಿತ್ತುವವರನ್ನು ಬದಿಗಿಟ್ಟು, ಜನತೆಗೆ ತಲುಪಿಸುವುದರತ್ತ ಸರ್ಕಾರ ಗಮನ ಹರಿಸಲಿ

ರೈತರಿಗೆ ಬೀಜ, ಗೊಬ್ಬರ ಪೂರೈಕೆ ಸೂಚನೆ

“ದಾವಣಗೆರೆ ಜಿಲ್ಲೆಯ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ತಕ್ಷಣ ವರದಿ ಕೊಡಿ. ಜೂನ್ 9 ಮಳೆಗಾಲ ಶುರುವಾಗುತ್ತದೆ. ಆಗ ಕೃಷಿ ಚಟುವಟಿಕೆ ಆರಂಭವಾಗುತ್ತದೆ‌. ರೈತರಿಗೆ ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪೂರೈಕೆ ಮಾಡಬೇಕು. ವಿಳಂಬಕ್ಕೆ ಅವಕಾಶವಿಲ್ಲ. ಯಾರೂ ಎಸಿ ಕಚೇರಿಗಳಲ್ಲಿ‌ ಕುಳಿತು ಕಾರ್ಯ ಮಾಡಬೇಡಿ” ಎಂದರು.

ಮಾಜಿ ಶಾಸಕ ರೇಣುಕಾಚಾರ್ಯ ವಿರುದ್ಧ ತನಿಖೆಗೆ ಆಗ್ರಹ

ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಭ್ರಷ್ಟಾಚಾರವನ್ನು ಶಾಸಕ ಶಾಂತನಗೌಡ ಬಯಲು ಮಾಡಿದರು. ರೇಣುಕಾಚಾರ್ಯ ಅವರು ಕಾನೂನು ಬಾಹಿರವಾಗಿ ಮನೆಗಳನ್ನ ನೀಡಿ ಭ್ರಷ್ಟಾಚಾರ ಮಾಡಿದ್ದಾರೆ. ಅದರ ಬಗ್ಗೆ ತನಿಖೆ ಮಾಡುವಂತೆ ಸಿದ್ದರಾಮಯ್ಯ ಸಮ್ಮುಖದಲ್ಲಿ ಆಗ್ರಹಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತೂ ಇಂತೂ ಬೆಂಗಳೂರಿಗೆ ಬಂತು ಮಳೆ; ಬಿಸಿಲಿನಿಂದ ಬೆಂದಿದ್ದ ಜನರ ಮೊಗದಲ್ಲಿ ಸಂತಸ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ಜನರು ಬಸವಳಿದಿದ್ದರು. ಕಳೆದ ಕೆಲವು...

ವಿಪ್ರೋಗೆ ಪ್ರತಿ ದಿನ 3 ಲಕ್ಷ ಲೀಟರ್ ಝೀರೋ ಬ್ಯಾಕ್ಟೀರಿಯಾ ಸಂಸ್ಕರಿಸಿದ ನೀರು ಸರಬರಾಜು

ಸಂಸ್ಕರಿಸಿದ ನೀರು ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಕೈಗೊಂಡಿರುವಂತಹ ಕ್ರಮಗಳಿಗೆ...

ಮೋದಿ ಸುಳ್ಳುಗಳು ಭಾಗ-7 | ಹತ್ತು ವರ್ಷದ ಮೋದಿ ಆಡಳಿತದಲ್ಲಿ ʼಅಚ್ಛೇ ದಿನ್‌ʼ ಬಂದಿದ್ದು ಯಾರಿಗೆ?

ಲೋಕಸಭಾ ಚುನಾವಣೆ‌ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ಕೈಗೊಂಟಿರುವ ಪ್ರಧಾನಿ ನರೇಂದ್ರ ಮೋದಿ...

ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಮನೆ ಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ...