ಹಾಸನ | ಚುನಾವಣೆ ವೇಳೆ ಬಂದೂಕು ಜಮೆ; ರೈತರು, ಬೆಳೆಗಾರರಿಗೆ ವಿನಾಯಿತಿ ನೀಡಲು ಮನವಿ

Date:

  • ಜಿಲ್ಲಾಧಿಕಾರಿ ಭೇಟಿ ಮಾಡಿದ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನಿಯೋಗ
  • ಸಮಿತಿಯಲ್ಲಿ ಪರಿಶೀಲಿಸಿ ವಿನಾಯಿತಿ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ

ಚುನಾವಣೆ ಸಂದರ್ಭದಲ್ಲಿ ಬಂದೂಕು ಜಮೆ ಮಾಡಿಕೊಳ್ಳುವುದರಿಂದ ಮಲೆನಾಡು ಭಾಗದ ರೈತರು ಮತ್ತು ಬೆಳೆಗಾರರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನಿಯೋಗವು ಹಾಸನ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಮಲೆನಾಡು ಭಾಗದಲ್ಲಿ ಒಂಟಿ ಮನೆಗಳು ಹೆಚ್ಚಾಗಿದ್ದು, ರೈತರು ಬೆಳೆದ ಬೆಳೆಯನ್ನು ಕಳ್ಳರಿಂದ ರಕ್ಷಣೆ ಮಾಡಿಕೊಳ್ಳಲು ಹಾಗೂ ಕಾಡುಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಬಂದೂಕು ಬಳಕೆ ಅನಿವಾರ್ಯ. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದ ರೈತರಿಗೆ ಬಂದೂಕು ಜಮೆಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅರ್ಚನಾ ಮಾತನಾಡಿ, “ಚುನಾವಣಾ ಆಯೋಗವು ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೋಲಿಸ್ ಪರಿಷ್ಟಾಧಿಕಾರಿಯನ್ನು ಒಳಗೊಂಡಂತೆ ಸಮಿತಿ ರಚಿಸಿದೆ. ಬಂದೂಕು ಜಮೆಯಿಂದ ವಿನಾಯಿತಿ ಕೋರುವ ರೈತ ಬೆಳೆಗಾರರು ಸಕಾರಣ ಸಲ್ಲಿಸಿ ಅರ್ಜಿ ಸಲ್ಲಿಸಿದಲ್ಲಿ ಅರ್ಜಿದಾರರ ಪೂರ್ವಾಪರ ಪರಿಶೀಲಿಸಿ, ಅವಶ್ಯಕವೆಂದು ಕಂಡು ಬಂದಲ್ಲಿ ಅಂತಹ ರೈತ ಬೆಳೆಗಾರರಿಗೆ ಬಂದೂಕು ಜಮೆಯಿಂದ ವಿನಾಯಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಲ್ಲುಕ್ವಾರಿ ದುರಂತ ಪ್ರಕರಣ; ವರ್ಷದ ಬಳಿಕ ಆರೋಪಿಗಳ ಬಂಧನ

ನಿಯೋಗದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷ ಕೆ ಎನ್ ಸುಬ್ರಹ್ಮಣ್ಯ , ಖಜಾಂಚಿ ಎಂ ಎಸ್ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಎಂ ಸಿ ಬಸವರಾಜ್ ಹಾಗೂ ಕೆ ಪಿ ಕೃಷ್ಣೇಗೌಡ, ನಿರ್ದೇಶಕ ಎಚ್ ಎಂ ರಮೇಶ್, ಕಸಬಾ ಹೋಬಳಿ ಬೆಳಗಾರರ ಸಂಘದ ಅಧ್ಯಕ್ಷ ಕೆ ಬಿ ಲೋಹಿತ್, ಆಲೂರು ತಾಲೂಕು ಬೆಳಗಾರರ ಸಂಘದ ಅಧ್ಯಕ್ಷ ರವಿಕುಮಾರ್ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...