ಬೆಂಗಳೂರಿನ 100 ಕಡೆ ಏಕಕಾಲದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಎಲೆಕ್ಟ್ರಿಕ್ ಶೋರೂಂ, ಗೃಹೋಪಯೋಗಿ ವಸ್ತುಗಳ ಅಂಗಡಿ ಸೇರಿದಂತೆ 100 ಕಡೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಸರಕುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ, ಅನಧಿಕೃತವಾಗಿ ಗೋದಾಮುಗಳಲ್ಲಿ ಶೇಖರಿಸಿಟ್ಟು, ಜಿಎಸ್‌ಟಿ ನೀಡದೇ ವ್ಯಾಪಾರ ನಡೆಸುತ್ತಿರುವ ಮಾಹಿತಿ ಮೇರೆಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಗೋದಾಮಿನಲ್ಲಿ ಲೆಕ್ಕಕ್ಕೆ ಸಿಗದ ಹಲವು ವಸ್ತು ಇಟ್ಟಿರುವುದು ಬೆಳಕಿಗೆ ಬಂದಿದೆ. ಅನಧಿಕೃತವಾಗಿ ಸರಕುಗಳನ್ನು ಶೇಖರಣೆ ಮಾಡಿಟ್ಟಿದ್ದ ಅಂಗಡಿ ಮಾಲೀಕರಿಗೆ ವಾಣಿಜ್ಯ ಅಧಿಕಾರಿಗಳು ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸೆ.5ರ ತಡರಾತ್ರಿ ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಟೆಕ್ಸ್ ಟೈಲ್ಸ್ ವ್ಯಾಪಾರಿಗಳು, ರೆಡಿಮೇಡ್ ಗಾರ್ಮೆಂಟ್ಸ್, ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಸೇರಿದಂತೆ ನೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆಯ ಪ್ರಮಾಣವನ್ನು ಪತ್ತೆ ಹಚ್ಚಲು ಹಣಕಾಸಿನ ದಾಖಲೆಗಳು ಮತ್ತು ಇತರ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಗೋಡೌನ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ವಾಣಿಜ್ಯ ತೆರಿಗೆ ಪಾವತಿಸದೆ ವಂಚನೆ ಎಸಗಿದ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ತೆರಿಗೆ ಪಾವತಿ ಮಾಡದೇ ಗೋಡೌನ್‌ನಲ್ಲಿರಿಸಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಗೋಡೌನ್ ಮತ್ತು ಅಂಗಡಿಗಳಿಗೆ ಜಿಎಸ್​ಟಿ ನಿಯಮಾವಳಿ ಪ್ರಕಾರ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಟ್ ಕಾಯಿನ್ ಹಗರಣ | ಪಂಜಾಬ್‌ನ ಹ್ಯಾಕರ್ ರಾಜೇಂದ್ರ ಸಿಂಗ್‌ ಎಸ್‌ಐಟಿ ವಶಕ್ಕೆ

ವ್ಯಾಪಾರಿಗಳು ಜಿಎಸ್‌ಟಿ ನೋಂದಣಿ ಪ್ರಮಾಣ ಪತ್ರ ಮತ್ತು ಸಂಖ್ಯೆಯನ್ನು ಪ್ರದರ್ಶಿಸಿಲ್ಲ. ನೋಂದಾಯಿತ ವ್ಯಾಪಾರ ಸ್ಥಳ ಮತ್ತು ಹೆಚ್ಚುವರಿ ವ್ಯಾಪಾರ ಸ್ಥಳ ಘೋಷಿಸಿಲ್ಲ. ಅಂಥವರಿಗೆ ವಾಣಿಜ್ಯ ತೆರಿಗೆ ಇಲಾಖೆ ದಂಡ ವಿಧಿಸಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...