ರಾಯಚೂರು | ಶಾಸಕಿ ಕರೆಮ್ಮಗೆ ನಿಂದನೆ ಆರೋಪ; ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

Date:

Advertisements

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್‌ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

Advertisements

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X