ಬಳ್ಳಾರಿ | ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಒತ್ತಾಯ

Date:

Advertisements

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಯಲೇ ಗತಿ ಎಂಬಂತಾಗಿದೆ.

ʼಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಆದರ್ಶ)ಯ ಮಕ್ಕಳಿಗೆ ಅಗತ್ಯವಾಗಿರುವ ಮೂಲ ಸೌಕರ್ಯ ಒದಗಿಸುವಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವಿಫಲವಾಗಿದೆ. ಇದರಿಂದ ವಿದ್ಯಾರ್ಥಿಗಳ ಓದಿಗೆ ಅಡ್ಡಿಯಾಗುತ್ತಿದೆʼ ಎಂದು ಪೋಷಕರು ದೂರಿದರು.

ಶಾಲೆಯ ಓದುವ ಮಕ್ಕಳಿಗೆ ಸುಸ್ಸಜಿತ ಕಟ್ಟಡ ಹೊಂದಿದೆ. ಆದರೆ ಶೌಚಾಲಯ ಇದ್ದರೂ ಅಲ್ಲಿ ನೀರಿನ ವ್ಯವಸ್ಥೆ, ನಿರ್ವಹಣೆ ಇಲ್ಲದೇ ಗಬ್ಬು ನಾರುತ್ತಿದೆ. ಶೌಚಾಲಯ ಸುತ್ತಮುತ್ತಲೂ ಗಿಡ ಗಂಟಿ ಬೆಳೆದಿರುವ ಕಾರಣ ವಿದ್ಯಾರ್ಥಿನಿಯರು ಶೌಚಾಲಯ ಬಳಕೆಗೆ ಹಿಂಜರಿಯುತ್ತಿದ್ದಾರೆ.

Advertisements
WhatsApp Image 2024 09 22 at 9.38.17 PM

ʼಶಾಲೆಯಲ್ಲಿ ಮಕ್ಕಳಿಗೆ ಶೌಚಾಲಯ ಇದ್ದರೂ ಅದು ಸಮಪರ್ಕವಾಗಿ ನಿರ್ವಹಣೆಯಿಲ್ಲದ ಕಾರಣಕ್ಕೆ ಬಯಲಿಗೆ ಹೋಗುವ ಪರಿಸ್ಥಿತಿ ಬಂದೊದಗಿದೆ. ಶೌಚಾಲಯ ಸುತ್ತಲೂ ಹುಲ್ಲು, ಮುಳ್ಳು ಬೆಳೆದಿದ್ದು ವಿದ್ಯಾರ್ಥಿಗಳಿಗೆ ಭೀತಿ ಕಾಡುತ್ತಿದೆ. ಬಯಲಿಗೆ ಹೋದರೆ ರಸ್ತೆ ಅಪಘಾತ ಸಂಭವಿಸುವ ಸಾಧ್ಯತೆ ಇದೆʼ ಎಂದು ಸ್ಥಳೀಯರಾದ ಸಿಂಗ್ಲಿ ನಾಗರಾಜ್, ವೀರೇಶ್ ಯಾದವ್, ಭೀಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಿಂದೂ-ಮುಸ್ಲಿಮರು ಶತ್ರುಗಳಲ್ಲ : ಅಕ್ಬರ್‌ ಅಲಿ

ನಾನು ಹೊಸದಾಗಿ ಶಾಲೆಗೆ ಬಂದಿರುವೆ, ಶಾಲೆಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು, ಕೂಡಲೇ ಅವುಗಳನ್ನು ಸರಿಪಡಿಸಿ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್‌ ಹೇಳಿದರು.

ವರದಿ : ರಾಧಾಕೃಷ್ಣ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X