ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

Date:

  • ನರೇಗಾ ಕೂಲಿಕಾರರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧನೆ
  • ವೃದ್ಧರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ

ಭಾರತ ಸಂವಿಧಾನ ನಮಗೆ ನೀಡಿರುವ ಈ ಹಕ್ಕನ್ನು ಮರೆಯದೇ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುವ್ಯವಸ್ಥಿತ ಆಡಳಿತ ರಚನೆಗೆ ಕಾರಣರಾಗೋಣ ಎಂದು ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಪಿಡಿಓ ಶೈನಾಜ್ ಮುಜಾವರ ಹೇಳಿದರು.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನರಗುಂದ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದ ಸಮುದಾಯ ಕಾಮಗಾರಿಯ ಬದು ನಿರ್ಮಾಣ ಕೆಲಸದ ಸಂದರ್ಭದಲ್ಲಿ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಮೇ 10 ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನ ನಿಮ್ಮ ಮಕ್ಕಳ ಭವಿಷ್ಯದ ದೃಷ್ಟಿಕೋನದಿಂದ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಮ್ಮ ಮತ ಮಾರಿಕೊಂಡರೇ ನಮ್ಮ ಆತ್ಮಸಾಕ್ಷಿಗೆ ನಾವು ದ್ರೋಹ ಬಗೆದಂತೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತದಾನ ಮಾಡಿ ಎಂದು ಸಲಹೆ ನೀಡಿದರು.

ಬೇಸಿಗೆ ಅವಧಿಯಲ್ಲಿ ಚುನಾವಣೆ ಬಂದಿರುವುದರಿಂದ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಇದೇ ಮೊದಲ ಬಾರಿ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮತದಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

ನರೇಗಾ ಕೂಲಿಕಾರರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ತಾಲೂಕು ಪಂಚಾಯಿತಿ ನರೇಗಾ ವಿಭಾಗದ ಮಾಹಿತಿ ಮತ್ತು ಶಿಕ್ಷಣ ಸಂಯೋಜಕ ಸುರೇಶ ಬಾಳಿಕಾಯಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ನರೇಗಾ ಯೋಜನೆಯಲ್ಲಿ ಕೆಲಸ ಮಾಡುವ ಕೂಲಿಕಾರರಿಗೆ ದಿನವೊಂದಕ್ಕೆ 316 ರೂಪಾಯಿ ನೀಡಲಾಗುತ್ತದೆ ಎಂದು ಹೇಳಿದರು.

ಬೇಸಿಗೆಯ ಅವಧಿಯಲ್ಲಿ ಕನಿಷ್ಟ 60 ದಿನಗಳವರೆಗೆ ನರೇಗಾದಲ್ಲಿ ಕೆಲಸ ಮಾಡಿದ ಕುಟುಂಬಕ್ಕೆ 18,960 ರೂಪಾಯಿ ಕೂಲಿಮೊತ್ತ ಸಿಗುತ್ತದೆ. ಈ ಹಣವನ್ನು ಕೂಲಿಕಾರರು ಮುಂಗಾರು ಆರಂಭದಲ್ಲಿ ಕೃಷಿ ಚಟುವಟಿಕೆಗಳ ಬಳಕೆಗೆ ಸಹಾಯಕವಾಗಿತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ, ಗ್ರಾಮಸ್ಥರು ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...