ರಾಯಚೂರು | ಮಾದಿಗರ ಮತ ಪಡೆಯಲು ಕಾಂಗ್ರೆಸ್‌ನಿಂದ ಒಳಮೀಸಲಾತಿ ಬಳಕೆ: ಮಾದಿಗ ದಂಡೋರ ಸಮಿತಿ ಆರೋಪ

Date:

Advertisements

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನದಂತೆ ಮತ್ತೊಂದು ಏಕಸದಸ್ಯ ಸಮಿತಿ ರಚಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಉಪಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುತ್ತದೆ ಎಂದು ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ಹೇಳಿದರು.

ಬುಧವಾರ ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿಗೆ ನಿರ್ಧರಿಸಿ ಏಕ ಸದಸ್ಯ ಸಮಿತಿ ರಚಿಸಿರುವುದು ವಿಳಂಬ ಮಾಡುವ ದುರುದ್ದೇಶವಿದೆ. ಸಚಿವ ಸಂಪುಟ ಸಭೆಯಂತೆ ಛಲವಾದಿ ಸಮುದಾಯದ ಸಚಿವರುಗಳು ಸರ್ಕಾರದ ಮೇಲೆ ಒತ್ತಡ ಹಾಕುವ ತಂತ್ರ ನಡೆಸಿದ್ದರು. ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯನವರು ಹೈಕೋರ್ಟ್‌ ನ್ಯಾಯಮೂರ್ತಿ ಮತ್ತೊಂದು ಸಮಿತಿ ರಚಿಸಿ ಉಪ ಚುನಾವಣೆಯಲ್ಲಿ ಮಾದಿಗ ಸಮದಾಯ ಓಟು ಪಡೆಯುವ ದುರುದ್ದೇಶ ಹೊಂದಿದ್ದಾರೆ ಎಂದು ಹೇಳಿದರು.

IMG 20241030 WA0007

ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಪರಮೇಶ್ವರ ಇವರು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಜಾರಿಗೆ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿದ್ದರು. ಮಾದಿಗ ಸಮುದಾಯದ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಮಾದಿಗರಿಗೆ ನಿಧಾನದ್ರೋಹ ಮಾಡುವ ಹುನ್ನಾರ ನಡೆಸಿದೆ. ಮೂರು ತಿಂಗಳಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ. ಸದಾಶಿವ ಆಯೋಗ ನೀಡಿರುವ ದತ್ತಾಂಶ ಸಿದ್ಧವಾಗಿದ್ದರೂ ಕಾಲಹರಣ ಮಾಡಲು ಏಕಸದಸ್ಯ ಸಮಿತಿ ರಚಿಸಲಾಗಿದೆ. ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿ ಗೆಲ್ಲಿಸಲು ಸಮದಾಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಹೇಳಿದರು.

Advertisements

ಮುಖ್ಯಮಂತ್ರಿಗಳು ಒಳಮೀಸಲಾತಿ ನಾನೇ ಜಾರಿ ಮಾಡುವುದಾಗಿ ಹೇಳುತ್ತಾ ಬಂದಿದ್ದಾರೆಯೇ ಹೊರತು ಸ್ವಪಕ್ಷೀಯರಿಂದ ಇರುವ ಒತ್ತಡವನ್ನು ಬಹಿರಂಗಪಡಿಸಿಲ್ಲ. ಅದನ್ನು ಬಹಿರಂಗಪಡಿಸಬೆಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ತಡೆಯುವುದಾಗಿ ಸರಕಾರ ಹೇಳಿದ್ದರೂ ಈಗಾಗಲೇ ನೋಟಿಫಿಕೇಶನ್ ಆಗಿರುವ ಹುದ್ದೆಗಳನ್ನು ಮತ್ತೊಂಡು ಕಡೆಯಿಂದ ನೇಮಕಾತಿ ಮುಂದುವರಿಸಿರುವುದು ಸಮುದಾಯಕ್ಕೆ ಮಾಡಿರುವ ವಂಚನೆಯಾಗಿದೆ. ಕಾಂಗ್ರೆಸ್ ಪ್ರಾರಂಭದಿಂದಲೂ ಒಳಮೀಸಲಾತಿಗೆ ಸಹಕರಿಸುತ್ತಿಲ್ಲ. ಸರಕಾರ ಕೇವಲ ಭರವಸೆಯನ್ನಾಗಿ ನೀಡಿ, ಸಮುದಾಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಮುದಾಯದ ಜನರು ಎಚ್ಚರಗೊಂಡು ಕಾಂಗ್ರೆಸ್ ತಕ್ಕ ಉತ್ತರ ನೀಡಬೇಕೆಂದು ನರಸಪ್ಪ ದಂಡೋರ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನೇಮಿಸಲು ಎಸ್ಎಫ್‌ಐ ಒತ್ತಾಯ

ಈ ಸಂದರ್ಭದಲ್ಲಿ ಮಾದಿಗ ದಂಡೋರ ಸಮಿತಿಯ ರಾಯಚೂರು ಜಿಲ್ಲಾಧ್ಯಕ್ಷ ಮಾನಪ್ಪ, ಮೇಸ್ತಿ ದುಳ್ಳಯ್ಯ ಗುಂಜಹಳ್ಳಿ, ರಂಜಿತ ದಂಡೋರ, ನರಸಿಂಹಲು ಗಾಜರಾಳ, ಯಲ್ಲಪ್ಪ ರಾಂಪೂರು, ಹನುಮಂತ ಜುಮಲಗೇರಾ, ದಾವೀದ್ ಮರ್ಚಟ್ಹಾಳ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X