ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

Date:

ಎಪ್ಪತ್ತು ವರ್ಷಗಳ ಕಾಲ ಭಾರತವನ್ನು ಆಳಿದ ಕಾಂಗ್ರೆಸ್ ಎಂದೂ ನ್ಯಾಯಾಲಯದ ವಿರುದ್ಧ ಪ್ರತಿಭಟನೆ ಮಾಡಿಲ್ಲ. ನ್ಯಾಯಾಲಯದ ಘನತೆ ಗೌರವ ಹೆಚ್ಚಿಸುವುದಕ್ಕೆ ಕಾಂಗ್ರೆಸ್ ಎಂದೆಂದೂ ಬದ್ಧವಾಗಿದೆ. ಕೇವಲ ಮೋದಿ ಎಂಬ ಉಪನಾಮದ ಕುರಿತು ನಮ್ಮ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಆಡಿದ ಮಾತುಗಳ ವಿಚಾರವಾಗಿ ಕೋರ್ಟ್‌ನಲ್ಲಿ ತೆರೆಮರೆಯಲ್ಲಿ ನಿಂತು ಅಧಿಕಾರಶಾಹಿ ಶಕ್ತಿಗಳು ಕಾನೂನನ್ನು ತಮ್ಮ ಗಾಳವನ್ನಾಗಿ ಬಳಸಿ ಕೊಳ್ಳುತ್ತಿದ್ದಾರೆಂಬ ಊಹೆ ಭಾರತೀಯರಲ್ಲಿ ಮೂಡುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

“ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಾಂಗ್ರೆಸ್ ಪ್ರತಿಭಟನೆ ಕೋರ್ಟ್ ವಿರುದ್ಧವೇ ಎಂದು ಪ್ರಶ್ನಿಸಿದ್ದಾರೆ. ಆದರೆ ಕಾಂಗ್ರೆಸ್ ಹುಟ್ಟಿದಾಗಿನಿಂದ ಸ್ವಾತಂತ್ರ್ಯಕ್ಕೆ ಮೊದಲು ಸ್ವಾತಂತ್ರ್ಯ ನಂತರ ಅಸಂಬದ್ಧ ಆಡಳಿತದ ವಿರುದ್ಧ ಚಳುವಳಿ ಮುಖಾಂತರ ನಾಡಿನ ಹಿತಕ್ಕಾಗಿ ತಾಯ್ನೆಲದ ಹಿತಕ್ಕಾಗಿ ಹೋರಾಡುತ್ತಾ ಬಂದ ಪಕ್ಷವಾಗಿದೆ. ಮಹಾತ್ಮಾ ಗಾಂಧಿಯವರ ಅಹಿಂಸಾ ಸಿದ್ದಾಂತವೇ ನಮ್ಮ ಪಕ್ಷದ ಮೂಲ ಧ್ಯೇಯವಾಗಿದೆ. ಕಾಂಗ್ರೆಸ್ ನವರು ಅಪ್ರಬುದ್ಧರ ಹಾಗೆ ವರ್ತಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಉತ್ತರವಾಗಿ ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರು ಪ್ರಬುಧ್ಧರೆಂಬುದಕ್ಕೆ 135 ಶಾಸಕರ ಬಲ ಕೊಟ್ಟಿದ್ದಾರೆ. ಸೋತ ಬಿಜೆಪಿಯವರು  ಅಪ್ರಬುದ್ಧರೆಂಬುದನ್ನು ಮತದಾರರು ತೋರಿಸಿ ಕೊಟ್ಟಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಈ ಸುದ್ದಿ ಓದಿದ್ದೀರಾ? ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

“ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಕಾಂಗ್ರೆಸ್ ಕೊಟ್ಟ ಗ್ಯಾರಂಟಿಗಳ ಜನಪ್ರಿಯತೆ ಬಿಜೆಪಿಯವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ‌. ಬಿಜೆಪಿಗೆ ರಾಹುಲ್ ಗಾಂಧಿಯವರ ಅನರ್ಹತೆಯ ಪರಿಣಾಮ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ರಾಷ್ಟ್ರದ ಜನತೆ ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಹವನಿಸುತ್ತಿದ್ದಾರೆ” ಎಂದು ಪ್ರತಿಕ್ರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...