ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್‌, ಪ್ರಚಾರ ಪಡೆಯುತ್ತಿರುವುದು ಬಿಜೆಪಿ: ಬಿ ಕೆ ಹರಿಪ್ರಸಾದ್‌ ಕಿಡಿ

Date:

  • ‘ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ’
  • ‘ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ’

ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಸ್ಥಳ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ, ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಕಿಡಿಕಾರಿದರು.

- Advertisement -

ಖಾಸಗಿ ಕಾರ್ಯಕ್ರಮದ ನಿಮ್ಮಿತ್ತ ಕಲಬುರಗಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ. ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಚಂದ್ರಯಾನ-3ರಲ್ಲಿ ಕಾರ್ಯನಿರ್ವಹಿಸಿದ್ದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ಗಮನಾರ್ಹ ಸಂಗತಿ” ಎಂದು ಹರಿಪ್ರಸಾದ್ ಹೇಳಿದರು.

“ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಘೋಷಣೆಗಳಿಗೇನು ಕಮ್ಮಿ ಇಲ್ಲ. ಬಿಜೆಪಿಯು ರಾಷ್ಟ್ರದ ವೈವಿಧ್ಯತೆ ಹಾಳು ಮಾಡುತ್ತಿದ್ದು, ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತಿದೆ. ಒನ್ ನೇಷನ್ ಒನ್ ಲೀಡರ್ ಅಂದರು ಅನ್ನಬಹುದು, ದೇಶದಲ್ಲಿ ಇಡಿ ಮತ್ತು ಸಿಬಿಐ ಬಳಸದೇ ಚುನಾವಣೆ ನಡೆಸಬೇಕಾಗಿದೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

“ಸಚಿವ ಸ್ಥಾನ ಸಿಗದಿರುವುದಕ್ಕೆ ನಾನು ಮುನಿಸಿಕೊಂಡಿಲ್ಲ. ನಾನು ಪಕ್ಕಾ ಕಾಂಗ್ರೆಸ್ಸಿನವನು. ನನ್ನ ಹೋರಾಟ ಮಂತ್ರಿ ಸ್ಥಾನಕ್ಕಲ್ಲ, ಸಣ್ಣ ಸಮುದಾಯಗಳಿಗೆ ಅವಕಾಶ ಸಿಗಬೇಕು ಎಂಬುದು. ಈ ವಿಚಾರದಲ್ಲಿ ನಾನು ಬೀದಿಗಿಳಿದು ಹೋರಾಟ ಮಾಡಲು ಸಿದ್ಧ” ಎಂದರು.

“ಜವಾನನಿಂದ ಹಿಡಿದು ದಿವಾನನವರೆಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ಕೊಡಬೇಕು ಎಂಬುದನ್ನು ಇಂದಿರಾ ಗಾಂಧಿಯವರನ್ನು ನೋಡಿ ಇಂದಿನವರು ಕಲಿಯಬೇಕು” ಎಂದು ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೇ ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...