ಬಾಗೇಪಲ್ಲಿ ಪುರಸಭೆ | ಕಾಂಗ್ರೆಸ್‌ಗೆ ಒಲಿದ ಅಧ್ಯಕ್ಷಗಾದಿ; ಕಾರ್ಯಕರ್ತರಲ್ಲಿ ಸಂಭ್ರಮ

Date:

Advertisements

ಬಾಗೇಪಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯುವ ಮೂಲಕ ಜಯಭೇರಿ ಸಾಧಿಸಿತು. ಅಧ್ಯಕ್ಷರಾಗಿ 23ನೇ ವಾರ್ಡಿನ ಸದಸ್ಯ ಎ.ಶ್ರೀನಿವಾಸ್, ಉಪಾಧ್ಯಕ್ಷರಾಗಿ 8ನೇ ವಾರ್ಡಿನ‌ ಸದಸ್ಯೆ ಸುಜಾತ ನರಸಿಂಹನಾಯ್ಡು ಅವಿರೋಧ ಅಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಎ.ಶ್ರೀನಿವಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ಸುಜಾತ ನರಸಿಂಹನಾಯ್ಡು ನಾಮಪತ್ರ ಸಲ್ಲಿಸಿದ್ದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಬಾಗೇಪಲ್ಲಿ ಪಟ್ಟಣ ಅಭಿವೃದ್ದಿ ದೃಷ್ಠಿಯಿಂದ ನಮ್ಮ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್‌ಗಳ ನಾಗರೀಕರ ಕಷ್ಟಗಳಿಗೆ ಸ್ಪಂದಿಸಿ, ಮೂಲ ಸೌಕರ್ಯಗಳ ಅಭಿವೃದ್ದಿಗೆ ಕೈಜೋಡಿಸಿ ಎಂದು ಸಲಹೆ ನೀಡಿದರು.

Advertisements

ಬಾಗೇಪಲ್ಲಿಯ ಪುರಸಭೆ ಅದ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾನೂನಿನ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸ್ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನೂತನ ಅದ್ಯಕ್ಷ, ಉಪಾಧ್ಯಕ್ಷರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಸದಸ್ಯರಾದ ಶ್ರೀನಿವಾಸ ರೆಡ್ಡಿ, ಅಶೋಕ ರೆಡ್ಡಿ, ಎ.ನಂಜುಂಡಪ್ಪ, ಗಡ್ಡಂ ರಮೇಶ್, ಗುಲ್ನಾಜ್‌ಬೇಗಂ, ಜಭಿವುಲ್ಲಾ ಖಾನ್, ಎ.ಶ್ರೀನಾಥ, ಶಭಾನಾ, ಪದ್ಮ ಮಲ್ಲೇಶ್, ಹಸೀನಾ ಮನ್ಸೂರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಿ.ಪ್ರಭಾಕರರೆಡ್ಡಿ, ಮುಖಂಡರಾದ ಗೂಳೂರು ರಮೇಶ್‌ ಬಾಬು, ಜಯಪ್ರಕಾಶ್‌ ನಾರಾಯಣ್, ಎ.ವಿ.ಪೂಜಪ್ಪ, ಮಂಜುನಾಥರೆಡ್ಡಿ, ಲಕ್ಷ್ಮೀ ನರಸಿಂಹಪ್ಪ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X