ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ರಾಜ್ಯ ವಕೀಲರ ಪರಿಷತ್ ಸಮಾವೇಶ ಉದ್ಘಾಟಿಸಿ ಅಭಿಮತ
  • ‘ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇರಬೇಕು’
  • ‘ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಕಾಲದಲ್ಲೂ ಇದ್ದಾರೆ’

ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

- Advertisement -

ರಾಜ್ಯ ವಕೀಲರ ಪರಿಷತ್ ಶನಿವಾರ ಮೈಸೂರಿನಲ್ಲಿ ಆಯೋಜಿಸಿದ್ದ 10ನೇ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, “ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತವಾದ ನ್ಯಾಯದಾನ ನೀಡಲು ಸಾಧ್ಯ. ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ” ಎಂದು ಹೇಳಿದರು.

“ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 2 ಗಂಟೆ 10 ನಿಮಿಷಗಳ ಕ್ರೌರ್ಯ, 3 ನಿಮಿಷಗಳ ತೋರಿಕೆಯ ಕಾರ್ಯ

“ಸಂವಿಧಾನ ಎಲ್ಲರಿಗೂ ಅವಕಾಶ ಕಲ್ಪಿಸಿಕೊಟ್ಟಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ. ಎಲ್ಲ ಮೇಲ್ವರ್ಗದವರೇ ವಕೀಲರಾಗಿದ್ದರು. ಕೆಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ” ಎಂದರು.

“ಶಾನುಭೋಗರೊಬ್ಬರು ಮಗನಿಗೆ ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...