ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಥಾ ಅ. 4 ಕ್ಕೆ ತುಮಕೂರಿಗೆ ಆಗಮನ

Date:

Advertisements

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ,ಹುಬ್ಬಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 05ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ತೆರಳಿ, ಫ್ರೀಡಂ ಪಾರ್ಕಿನಿಂದ ವಿಧಾನಸೌಧದ ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದರು.

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಹಿಂದ ಸಂಘಟನೆಯ ಮುಖಂಡರಾದ ಮುತ್ತಣ್ಣ ಎಸ್.ಶಿವಳ್ಳಿ ಅವರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಹಿಂದ ಕಾರ್ಯಕರ್ತರು,ಮುಖಂಡರು ಅಕ್ಟೋಬರ್ 4ರ ಗುರುವಾರ ಬೆಳಗ್ಗೆ ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾತಾಯಾತ್ರೆ ಹೊರಡಲಿದ್ದು, ಗುರುವಾರ ಸಂಜೆ ತುಮಕೂರು ತಲುಪಿ ವಾಸ್ತವ್ಯ ಹೂಡಲಿದೆ.ಅಕ್ಟೋಬರ್ 05ರ ಶುಕ್ರವಾರ ತುಮಕೂರಿನಿಂದ ಹೊರಟು ಫ್ರೀಡಂ ಪಾರ್ಕಿಗೆ ತಲುಪಿ,ಅಲ್ಲಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದೆ.ಇದು ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ತುಂಬುವ ನಿಟ್ಟಿನಲ್ಲಿ ಅಹಿಂದ ವರ್ಗಗಳು ಸೇರಿದಂತೆ ಎಲ್ಲಾ ಶೋಷಿತ ಸಮುದಾಯಗಳು ಒಗ್ಗೂಡಿ ನಡೆಸುತ್ತಿರುವ ಜಾಥಾವಾಗಿದೆ ಎಂದರು.

ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ದ ಮುಡಾ ಮತ್ತು ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಮ್ಮ ಅವರ ವಯುಕ್ತಿಕ ಭೂಮಿ ವಿವಾದವನ್ನು ಎಳೆದುತಂದು, ಅನಗತ್ಯ ಕಿರುಕುಳ ನೀಡುವ ಕೆಲಸವನ್ನು ವಿರೋಧಪಕ್ಷಗಳು ಕೇಂದ್ರ ಸರಕಾರದ ಬೆಂಬಲದೊಂದಿಗೆ ಮಾಡುತ್ತಿವೆ.ಹಾಗಾಗಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಾವಿದ್ದೇವೆ ಎಂಬುದನ್ನು ಸಾರುವ ಉದ್ದೇಶದಿಂದ ಈ ಬೃಹತ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಹಿತೈಷಿಗಳು,ಅಭಿಮಾನಿಗಳು ಅಹಿಂದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಿದ್ದರಾಮಯ್ಯ ಅವರಿಗೆ ನೈತಿಕ ಸ್ಥೆöÊರ್ಯ ತುಂಬುವ ಕೆಲಸ ಮಾಡಬೇಕೆಂದು ಕೆ.ಮಹಾಲಿಂಗಯ್ಯ ಮನವಿ ಮಾಡಿದರು.

Advertisements

ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯ ಮಾತನಾಡಿ,ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವಿತ ಅವಧಿಯಲ್ಲಿ ಎಂದಿಗೂ ಕಿಚನ್ ಕ್ಯಾಬಿನೆಟ್‌ಗೆ ಅವಕಾಶ ನೀಡಿದವರಲ್ಲ. ಇಂತಹ ವ್ಯಕ್ತಿಯ ವಿರುದ್ದ ಅರಿಸಿನ ಕುಂಕುಮಕ್ಕೆಂದು ಪತ್ನಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನೀಡಿದ್ದ ಭೂಮಿಯನ್ನು ವಿವಾದ ಮಾಡಿ, ಅವರ ನೈತಿಕ ಸ್ಥೖರ್ಯ ಕುಗ್ಗಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್ ಮಾಡುತ್ತಿದೆ.ಇದನ್ನು ಖಂಡಿಸಿ,ಸಿದ್ದರಾಮಯ್ಯ ಅವರ ಬೆನ್ನಿಗೆ ಅಹಿಂದ ಇದೆ ಎಂಬುದು ತೋರ್ಪಡಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ.ಗ್ಯಾರೆಂಟಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕಿದೆ.ಬೆಂಗಳೂರಿನಲ್ಲಿ ನಡೆಯುವ ಪಾದಯಾತ್ರೆಗೆ ತುಮಕೂರಿನಿಂದ ಅಹಿಂದ ಕಾರ್ಯಕರ್ತರು, ಮುಖಂಡರು ಹೊರಡಲು ಸರಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.ಅಹಿಂದ ವರ್ಗದವರು, ಸಿದ್ದರಾಮಯ್ಯ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪಾದಯಾತ್ರೆ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆದಿಲ್,ಅಹಿಂದ ರಾಷ್ಟ್ರೀಯ ಸಂಘಟನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸುನಿತಾ ನಟರಾಜ್, ನಿರ್ದೇಶಕರಾದ ಪ್ರೇಮ,ಲಕ್ಷಿö್ಮನಾರಾಯಣ ರಾಗಿ ಮಲ್ಲೇನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X