ಮೈಸೂರು | ಗಂಗೋತ್ರಿ ಬಡಾವಣೆಯಲ್ಲಿ ಕಲುಷಿತ ನೀರು ಸರಬರಾಜು: ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

Date:

ನಗರದ ಗಂಗೋತ್ರಿ ಬಡಾವಣೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿ ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಬಡಾವಣೆಯ ನಿವಾಸಿಗಳ ನಿಯೋಗವು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ (ಹೆಚ್ಚುವರಿ ಆಯುಕ್ತರ ಮೂಲಕ) ಮನವಿ ಸಲ್ಲಿಸಿತು.

- Advertisement -

ಬಡಾವಣೆಯ ಕೆಲ ಕ್ರಾಸ್‌ಗಳಲ್ಲಿ ಮೇ 31ರಿಂದ ಕುಡಿಯುವ ನೀರಿಗೆ ಕೊಳಚೆ ನೀರು ಮಿಶ್ರಣಗೊಂಡು ಸರಬರಾಜಾಗಿದ್ದು, ದುರ್ವಾಸನೆಯುಕ್ತ ನೀರು ಮನೆಗಳ ಸಂಪು ಹಾಗೂ ಟ್ಯಾಂಕ್‌ಗಳಿಗೆ ಸೇರಿದೆ. ಇದನ್ನು ತಿಳಿಯದೆ ಬಳಸಿದ ಹಲವಾರು ನಿವಾಸಿಗಳು ಅನಾರೋಗ್ಯಕ್ಕೆ ಒಳಗಾಗಿದ್ದು, ಮಕ್ಕಳು ಹಾಗೂ ವೃದ್ಧರು ಸೇರಿದಂತೆ ಅನೇಕರಿಗೆ ವಾಂತಿ, ಬೇಧಿ ಮತ್ತು ಜ್ವರದಂತಹ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸಮಸ್ಯೆ ಕುರಿತು ದೂರು ನೀಡಿದ ಬಳಿಕ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೂನ್ 8ರಿಂದ ತಾತ್ಕಾಲಿಕವಾಗಿ ಸಮಸ್ಯೆ ನಿಯಂತ್ರಣಕ್ಕೆ ಬಂದಿರುವಂತೆ ಕಂಡುಬಂದಿದೆ. ಆದರೆ ನಿವಾಸಿಗಳು ತಮ್ಮ ಖರ್ಚಿನಲ್ಲೇ ಸಂಪು ಮತ್ತು ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ದೂರಿದ್ದಾರೆ.

ಪ್ರಸ್ತುತ ಬಡಾವಣೆಯಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ಕುಡಿಯುವ ನೀರಿನ ಪೈಪ್‌ಗಳಿಗೆ ಕೊಳಚೆ ನೀರು ಯಾವ ಭಾಗದಲ್ಲಿ ಸೇರುತ್ತಿದೆ ಎಂಬುದನ್ನು ಪತ್ತೆಹಚ್ಚದೇ ಹೋದರೆ ಮುಂದೆಯೂ ಇದೇ ಸಮಸ್ಯೆ ಮರುಕಳಿಸುವ ಸಾಧ್ಯತೆ ಇದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ನೀರು ಸರಬರಾಜು ಹಾಗೂ ಒಳಚರಂಡಿ ಜಾಲದ ತಾಂತ್ರಿಕ ಪರಿಶೀಲನೆಯನ್ನು ಪರಿಣತ ಇಂಜಿನಿಯರ್‌ಗಳ ಮೂಲಕ ನಡೆಸಿ ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಮೂರು ತಿಂಗಳಿನಿಂದ ಆಹಾರ ಕಿಟ್ ಇಲ್ಲ: ಆದಿವಾಸಿಗಳ ಆಕ್ರೋಶ

ನಿಯೋಗದಲ್ಲಿ ಸೀಮಾ, ಆಸಿಯಾ ಬೇಗಂ, ರಘುಪತಿ, ಸುಮಾ, ಸುಭಾಷ್, ನಾಗರಾಜ್ ಸೇರಿದಂತೆ ಬಡಾವಣೆಯ ಹಲವಾರು ನಿವಾಸಿಗಳು ಭಾಗವಹಿಸಿದ್ದರು. ಮನವಿಯೊಂದಿಗೆ ಬಡಾವಣೆಯ ಜನರಿಂದ ಸಂಗ್ರಹಿಸಲಾದ ಸಹಿಗಳನ್ನೂ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...