ಕಲಬುರಗಿ | ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Date:

Advertisements

ಬಾಲಕಿಯನ್ನು ಪುಸಲಾಯಿಸಿ ಮುಂಬೈಗೆ ಅಪಹರಿಸಿಕೊಂಡು ಹೋಗಿ ನಿರಂತರ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದರಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದ ಶಿವಾನಂದ ಸುಭಾಷ ಧನ್ನೂರೆ ಎಂಬಾತನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ, 28 ಸಾವಿರ ರೂ. ದಂಡ ವಿಧಿಸಿದೆ.

ಮಹಾಗಾಂವ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 2022ರ ಮಾರ್ಚ್ 11ರಂದು ಶಿವಾನಂದ ಎಂಬಾತ ಗ್ರಾಮದ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಆಕೆಯನ್ನು ಬೈಕ್‌ ಮೇಲೆ ಕೂರಿಸಿಕೊಂಡು ಮಹಾರಾಷ್ಟ್ರದ ಉಮರ್ಗಾಕ್ಕೆ ಕರೆದುಕೊಂಡು ಹೋಗಿದ್ದ, ಅಲ್ಲಿಂದ ಬಸ್‌ ಮೂಲಕ ಮುಂಬೈಗೆ ಕರೆದೊಯ್ದು, ಅಲ್ಲಿ ಗಂಡ-ಹೆಂಡತಿ ಎಂದು ಹೇಳಿ ಮನೆ ಬಾಡಿಗೆಗೆ ಪಡೆದು ಅಕ್ರಮ ಬಂಧನದಲ್ಲಿಟ್ಟು 2022ರ ಮಾರ್ಚ್‌ 12ರಿಂದ ಡಿಸೆಂಬರ್‌ 11ರವರೆಗೆ ಸತತ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಪೋಕ್ಸೊ ಕಾಯ್ದೆ ಹಾಗೂ ಐಪಿಸಿ ಕಲಂಗಳಡಿ ಜೈಲುಶಿಕ್ಷೆ ಮತ್ತು ದಂಡ ವಿಧಿಸಿದರು.

Advertisements

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X