ಬೀದರ್‌ | ಎರಡು ಗಂಟೆ ಬಾರ್‌ನಲ್ಲಿ ಕಳೆದಿದ್ದ ಗುತ್ತಿಗೆದಾರ ಸಚಿನ್‌ ಪಾಂಚಾಳ್‌

Date:

Advertisements

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಡಿದ್ದು, ಆತ್ಮಹತ್ಯೆಗೂ ಎರಡು ದಿನ‌ದ ಮೊದಲು ಸಚಿನ್‌ ಬೀದರ್‌ ನಗರದ ಬಾರ್‌ವೊಂದರಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಇದ್ದದ್ದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಡಿ.24 ರಂದು ಸಂಜೆ 6:27 ಕ್ಕೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಆಗಮಿಸಿದ್ದ ಸಚಿನ್ ಪಾಂಚಾಳ, ಬಿಯರ್ ಕುಡಿದು, ಊಟ ಮಾಡಿ ರಾತ್ರಿ 8.46ಕ್ಕೆ ಬಾರ್‌ನಿಂದ ವಾಪಸ್ ಹೋಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೋಟೆಲ್‌ನಲ್ಲಿ ವೇಟರ್ ಕೃಷ್ಣ ಎಂಬಾತನ ಮೊಬೈಲ್‌ನಿಂದ ಸಹೋದರಿಯರಿಗೆ ಕಾಲ್ ಮಾಡಿದ್ದ. ಇದು ಕುಟುಂಬಸ್ಥರಿಗೆ ಆತ ಮಾಡಿದ ಕೊನೆಯ ಕಾಲ್ ಆಗಿತ್ತು. ಅಷ್ಟೇ ಅಲ್ಲ ತನ್ನ ಭಾವನಿಂದ‌‌ ವೇಟರ್‌ ಕೃಷ್ಣಗೆ 1,500 ರೂ. ಹಾಕಿಸಿಕೊಂಡಿದ್ದರು. 650 ರೂ. ಬಾರ್ ಬಿಲ್ ಪೇ ಮಾಡಿ , ಉಳಿದ ಹಣ ವೇಟರ್ ಕೃಷ್ಣನಿಂದ ಪಡೆದಿದ್ದರು. ಹೋಗುವಾಗ ಯಾರದೇ ಫೋನ್ ಕಾಲ್ ಬಂದರೂ ಸ್ವೀಕರಿಸದಂತೆ ವೇಟರ್‌ ಕೃಷ್ಣಾಗೆ ಸಚಿನ್‌ ಹೇಳಿ ಬಾರ್‌ನಿಂದ ಹೋಗಿದ್ದರು ಎಂಬುದು ಗೊತ್ತಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಡಿ.25ಕ್ಕೆ ಸಚಿನ್ ಮರಣ ಪತ್ರ ಬರೆದು, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು. ಇದನ್ನು ಗಮನಿಸಿದ್ದ ಸಹೋದರಿಯರು ಅಂದು ವೇಟರ್ ಕೃಷ್ಣ ಮೊಬೈಲ್‌ಗೆ ಸಚಿನ್ ಸಹೋದರಿಯರು‌. ಡಿ.26ರಂದು‌ ಸಚಿನ್‌ ಪಾಂಚಾಳ್ ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X