ಬೀದರ್‌ | ‌ಗುತ್ತಿಗೆದಾರ ಸಚಿನ್ ಆತ್ಮಹತ್ಯೆ : ಸಿಬಿಐ ತನಿಖೆಗೆ ಒಪ್ಪಿಸಲು ಬಿ.ವೈ.ವಿಜಯೇಂದ್ರ ಆಗ್ರಹ

Date:

Advertisements

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಮೃತ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ (26) ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತ್ರತ್ವದ ಬಿಜೆಪಿ ನಿಯೋಗ ಭಾನುವಾರ ಸಂಜೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿತು.

ʼಅಕ್ಷರಶಃ ಸಚಿನ್ ಸಾವಿನಿಂದ ದಿಗ್ಮೂಢ ಸ್ಥಿತಿಯಲ್ಲಿರುವ‌ ಕುಟುಂಬದ ಸ್ಥಿತಿ ಮಾನವೀಯತೆ ಇರುವ ಎಂಥವರ ಅಂತಃಕರಣವನ್ನೂ ಕಲಕುತ್ತದೆ. ಅನಾಥ ಪ್ರಜ್ಞೆ ಎದುರಿಸುತ್ತಿರುವ ಮೃತರ ಆಶ್ರಯಿಸಿದ್ದ ಕುಟುಂಬ ಸದಸ್ಯರ ಹಾಗೂ ಬಂಧುಗಳ ಆಕ್ರಂದನದ ಶಾಪ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತಟ್ಟದೇ ಬಿಡದು, ದುಷ್ಕರ್ಮಿಗಳ ಗುಂಪನ್ನು ಪೋಷಿಸುತ್ತಿರುವ ಪ್ರಿಯಾಂಕ್ ಖರ್ಗೆ ಇದರ ಫಲ ಅನುಭವಿಸಲೇಬೇಕು. ಸಚಿನ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಬಿಜೆಪಿ ಹೋರಾಟ ಕೊನೆಯಾಗದು, ನೊಂದ ಸಚಿನ್ ಕುಟುಂಬದೊಂದಿಗೆ ನಾವಿದ್ದೇವೆʼ ಎಂದು ಹೇಳಿದರು.

“ಹೇಳೋದು ಸಿದ್ದಾಂತ ಮಾಡೋದು ದುರಾಚಾರ” ಊರಿಗೆಲ್ಲ ಉಪದೇಶ, ಸಿದ್ಧಾಂತ ಹೇಳುತ್ತಾ ತಾವು ಮಾತ್ರ ನೊಂದವರ ಧ್ವನಿಯಾಗಬಲ್ಲೆವು ಎಂಬ ರೀತಿ ತಮ್ಮನ್ನು ಬಿಂಬಿಸಿಕೊಳ್ಳುತ್ತಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ನೈಜ ಮುಖವಾಡ ಈ ಘಟನೆಯಿಂದ ಕಳಚಿ ಬಿದ್ದಿದೆʼ ಎಂದು ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.

Advertisements

ʼವಿರೋಧ ಪಕ್ಷದಲ್ಲಿದಾಗ ಇಂಥದ್ದೇ ಪ್ರಕರಣಗಳಲ್ಲಿ ಅಧಿಕಾರದಲ್ಲಿದ್ದವರ ರಾಜೀನಾಮೆಗೆ ಆರ್ಭಟಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನಾವರು ತಮ್ಮದೇ ಸರ್ಕಾರದ ಅವಧಿಯಲ್ಲಿ ನಡೆದಿರುವ ಘಟನೆಯ ಹಿನ್ನಲೆಯಲ್ಲಿ ಈ ಕೂಡಲೇ ದುಷ್ಟರು, ಪುಂಡರು, ಕಮಿಷನ್ ವಸೂಲಿಗಾರರನ್ನು ಜೊತೆಗಿಟ್ಟುಕೊಂಡು ಒಬ್ಬ ಅಮಾಯಕ ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣರಾಗಿರುವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆದುಕೊಂಡು ತನಿಖೆಯು ಪಾರದರ್ಶಕವಾಗಿ ನಡೆಯಲು ಅವಕಾಶ ಮಾಡಿಕೊಡಲಿʼ ಎಂದು ಆಗ್ರಹಿಸಿದರು.

ʼರಾಜ್ಯ ಸರ್ಕಾರ ಸಚಿನ್ ಕುಟುಂಬಕ್ಕೆ ಕನಿಷ್ಠ ಒಂದು ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು.ಈ ಪ್ರಕರಣದ ಹಿಂದೆ ಎಷ್ಟೇ ಪ್ರಭಾವವಿದ್ದರೂ ಯಾವುದೇ ಕಾರಣಕ್ಕೂ ಮುಚ್ಚಿ ಹಾಕಲು ಬಿಡುವುದಿಲ್ಲ. ಸಿಎಂ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳದೆ ಸಿಬಿಐ ತನಿಖೆಗೆ ಒಪ್ಪಿಸಿ, ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಸಿಎಂ ಸಿದ್ದರಾಮಯ್ಯ ಅವರನ್ನು ತುದಿಗಾಲಲ್ಲಿ ನಿಲ್ಲಿಸಲು ಬಿಜೆಪಿ ಹೋರಾಟ ಮಾಡುತ್ತೇವೆʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗುತ್ತಿಗೆದಾರ ಆತ್ಮಹತ್ಯೆ‌ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಸರ್ಕಾರ ಬದ್ಧ : ಸಚಿವ ಈಶ್ವರ ಖಂಡ್ರೆ

ನಮಗೆ ಯಾವುದೇ ಅನುಕಂಪ, ಪರಿಹಾರ ಬೇಡ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕೆಂದು ಮೃತ ಸಚಿನ್‌ ಕುಟುಂಬ ಆಗ್ರಹಿಸುತ್ತಿದೆ. ಸಚಿನ್‌ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆಯವರು ಕೂಡಲೇ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ತನಿಖೆಗೆ ಸಿದ್ದರಾಗಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X