ಬೀದರ್‌ | ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ; ಪ್ರಭು ಚವ್ಹಾಣ ಸೂಚನೆ

Date:

  • ಔರಾದ(ಬಿ) ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ
  • ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರುವಂತೆ ನಿರ್ದೇಶನ

ಕ್ಷೇತ್ರದ ಜನತೆ ನಾಲ್ಕನೇ ಅವಧಿಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ಶಾಸಕ ಪ್ರಭು ಬಿ ಚವ್ಹಾಣ ಹೇಳಿದರು.

- Advertisement -

ಬೀದರ್ ಜಿಲ್ಲೆ ಔರಾದ(ಬಿ) ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುವಲ್ಲಿ ಅಧಿಕಾರಿಗಳ ಪಾತ್ರ ಮಹತ್ತರವಾಗಿರುತ್ತದೆ. ಎಲ್ಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಕೆಲವು ಕಚೇರಿಗಳಲ್ಲಿ ಸಿಬ್ಬಂದಿಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಅಂತವರನ್ನು ತೆಗೆದು ಇಲಾಖೆ ಕಚೇರಿಗಳನ್ನು ಜನಸ್ನೇಹಿಯಾಗಿಸಬೇಕು ಎಂದು ಸೂಚಿಸಿದರು.

ಮುಂಗಾರು ಹಂಗಾಮು ಆರಂಭವಾಗಲಿದ್ದು, ರೈತರು ಬಿತ್ತನೆ ಕೆಲಸಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಸುವ ಮೂಲಕ ಬಿತ್ತನೆ ಕೆಲಸ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಬಿತ್ತನೆ ಬೀಜ ಗಡಿ ರಾಜ್ಯಗಳಿಗೆ ಸಾಗಾಟವಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.

ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಎರಡು ತಿಂಗಳ ಹಿಂದೆ ಸುರಿದ ಅಕಾಲಿಕ‌ ಮಳೆಯಿಂದ ಬೆಳೆ ಹಾನಿಯಾದ ಎಲ್ಲ ರೈತರಿಗೆ ಶೀಘ್ರ ಪರಿಹಾರಧನ ಬಿಡುಗಡೆ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇಲಾಖೆಯಿಂದ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದು, ರೈತರ ಬೇಡಿಕೆಗೆ ಅನುಸಾರ ಬಿತ್ತನೆ ಬೀಜ ಮತ್ತು ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ, ಆಸ್ಪತ್ರೆಯಲ್ಲಿನ ಕೊರತೆಯ ಬಗ್ಗೆ ಇನ್ನೂ ದೂರುಗಳು ಬರುತ್ತಿದ್ದು, ಇವುಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಕ್ಷೇತ್ರದಲ್ಲಿರುವ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯಗಳ ನಿರ್ಮಾಣ ಮಾಡುವ ಬಗ್ಗೆ ಹಿಂದೆ ನಿರ್ದೇಶನ ನೀಡಿದ್ದೆ, ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಒಳಗೊಂಡು ಎಲ್ಲ ಸರ್ಕಾರಿ ಕಚೇರಿ ಆವರಣಗಳಲ್ಲಿ ಸಸಿಗಳನ್ನು ನೆಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ದಣಿವರಿಯದ ಜೀವಗಳ ಸ್ವಾಭಿಮಾನಿ ಬದುಕಿಗೆ ‘ಲಿಂಬು ಸೋಡಾ’ ಆಸರೆ

ಕುಡಿಯುವ ನೀರು ಪೂರೈಕೆ ಮತ್ತು ಸಣ್ಣ ನೀರಾವರಿ ಒಳಗೊಂಡು ಎಲ್ಲ ಇಲಾಖೆಗಳಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಆರಂಭವಾಗದಿರುವ ಕೆಲಸಗಳನ್ನು ಶೀಘ್ರ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ ಘಾಟೆ, ತಹಶಿಲ್ದಾರ್‌ ಮಲ್ಲಿಕಾರ್ಜುನ, ನಾಗರಾಜ ಹಾಗೂ ನಾನಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...