ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳ : ಶಾಸಕ ಪ್ರಭು ಚವ್ಹಾಣ

Date:

Advertisements

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನೆ ತೀವ್ರ ನಿರಾಶಾದಾಯಕವಾಗಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಟೀಕಿಸಿದ್ದಾರೆ.

ಬಳ್ಳಾರಿಯ ಹೊಸಪೇಟೆಯಲ್ಲಿ ಸರ್ಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ರಾಜ್ಯದಲ್ಲಿ ವಿದ್ಯುತ್, ಪೆಟ್ರೋಲ್, ಡಿಸೇಲ್, ಹಾಲಿನಂತಹ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಸಿ ಬಡ ಜನರನ್ನು ಸಂಕಷ್ಟಕ್ಕೆ ದೂಡಿ ಸಾಧನಾ ಸಮಾವೇಶ ಆಯೋಜಿಸುತ್ತಿರುವುದು ಸರ್ಕಾರದ ಅಸಫಲತೆಯ ಸಮಾವೇಶದಂತೆ ಭಾಸವಾಗುತ್ತಿದೆ’ ಎಂದಿದ್ದಾರೆ.

‘ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಅಭಿವೃದ್ಧಿಯನ್ನೇ ಮರೆತಿದೆ. ರಾಜ್ಯದಲ್ಲಿ ಅರಾಜಕತೆ ವಿಪರೀತವಾಗಿ ಹೆಚ್ಚುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆಯಿಂದ ದುಪ್ಪಟ್ಟು ವಸೂಲಿ ಮಾಡಲಾಗುತ್ತಿದೆ. ಪರಿಶಿಷ್ಟರ ಹಣ ದುರ್ಬಳಕೆ, ವಾಲ್ಮೀಕಿ ಹಗರಣ ಸೇರಿದಂತೆ ನಾನಾ ಅವಾಂತರಗಳನ್ನು ಮಾಡಿದ ಸರ್ಕಾರದ ಸಾಧನೆ ಎರಡು ವರ್ಷಗಳಲ್ಲಿ ಹೇಳಿಕೊಳ್ಳುವಂತಹದ್ದು ಏನು ಇಲ್ಲ’ ಎಂದು ಹೇಳಿದ್ದಾರೆ.

Advertisements

‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಅಭಿವೃದ್ಧಿಗೆ ಹಣವಿಲ್ಲ, ನಿಯಮಿತವಾಗಿ ಸಂಬಳವಾಗುತ್ತಿಲ್ಲವೆಂದು ನೌಕರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಎಲ್ಲರ ಹಿತಕ್ಕಾಗಿ ಕೆಲಸ ಮಾಡಬೇಕಾದ ಸರ್ಕಾರ ಕೇವಲ ಒಂದು ಸಮುದಾಯದ ಓಲೈಕೆಗಾಗಿ ನಿರಂತರ ಪ್ರಯಾಸಪಡುತ್ತಿದೆ’ ಎಂದು ದೂರಿದರು.

ಇದನ್ನೂ ಓದಿ : ಬೀದರ್ | ಪೊಲೀಸ್ ಇಲಾಖೆಗೆ 7 ಹೊಸ ವಾಹನಗಳ ಹಸ್ತಾಂತರ

‘ಸರ್ಕಾರದ ಬಗ್ಗೆ ಬಡವರು, ರೈತರು, ಶ್ರಮಿಕರು ರೋಸಿ ಹೋಗಿದ್ದಾರೆ. ಹಿಂದುಗಳ ಹತ್ಯೆ, ಧಾರ್ಮಿಕ ನಂಬಿಕೆಗಳ ಮೇಲೆ ಪ್ರಹಾರದಂತಹ ಅನ್ಯಾಯಗಳು ನಿರಂತರವಾಗಿ ನಡೆಯುತ್ತಿವೆ. ಬಹುತೇಕ ಇಲಾಖೆ ನಿಷ್ಕ್ರೀಯಗೊಂಡಿವೆ. ಇಂತಹದರಲ್ಲಿ ಸಾಧನಾ ಸಮಾವೇಶ ನಡೆಸುತ್ತಿರುವುದು ಹಾಸ್ಯಾಸ್ಪದ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X