ಕೋವಿಡ್-19 ಹೆಚ್ಚಳ; ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯ

Date:

  • ಕೋವಿಡ್‌-19 ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ
  • ಕೆಳ ಶ್ವಾಸನಾಳವು ಕೋವಿಡ್‌-19 ಸೋಂಕಿಗೆ ಒಳಗಾದರೆ ಉಸಿರಾಟದ ತೊಂದರೆ ಎದುರಾಗುತ್ತದೆ

ರಾಜ್ಯದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಭಾನುವಾರ, ರಾಜ್ಯದಲ್ಲಿ 235 ಹೊಸ ಪ್ರಕರಣಗಳ ದಾಖಲೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,076ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ 117 ಪ್ರಕರಣಗಳು ದಾಖಲೆಯಾಗಿದ್ದು, ರಾಜ್ಯದ ಹೊಸ ಕೊರೊನಾ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಪ್ರಕರಣಗಳು ಕಂಡುಬಂದಿವೆ. ಭಾನುವಾರ ಶಿವಮೊಗ್ಗ ಜಿಲ್ಲೆಯಲ್ಲಿ (27), ವಿಜಯನಗರ (13), ಚಾಮರಾಜನಗರ (12), ಮೈಸೂರು (11) ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ (10)ರಂತೆ ದೈನಂದಿನ ಪ್ರಕರಣಗಳು ದ್ವಿಗುಣಗೊಂಡಿವೆ.

ಈ ಸುದ್ದಿ ಓದಿದ್ದೀರಾ? ದೇಶದಲ್ಲಿ ಕೋವಿಡ್ ಸಂಖ್ಯೆ 7,830 ಏರಿಕೆ; 16 ಮಂದಿ ಮೃತ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಜೊತೆಗೆ ನಾವೂ ಕೂಡ ಎಚ್ಚರ ವಹಿಸುತ್ತಿದ್ದೇವೆ. ವೈದ್ಯರು ಮತ್ತು ರೋಗಿಗಳ ನಡುವಿನ ಸಂವಹನ ಮಾರ್ಗಗಳನ್ನು ಸುಧಾರಿಸಲು ಯೋಚಿಸುತ್ತಿದ್ದೇವೆ. ನೈರ್ಮಲ್ಯ ಮತ್ತು ಸೋಂಕು ನಿಯಂತ್ರಿಸುವಲ್ಲಿ ಪ್ರಯತ್ನಗಳು ನಡೆಯುತ್ತಿವೆ” ಎಂದು ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಸಂಬಂಧಿತ ಆಸ್ಪತ್ರೆಗಳ ಕೋವಿಡ್ -19 ನೋಡಲ್ ಅಧಿಕಾರಿ ಡಾ.ಸ್ಮಿತಾ ಸೆಗು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...