ಸಚಿವ ವೆಂಕಟೇಶ್ ಹೇಳಿಕೆಯಿಂದ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ‌ ತಲೆ ಎತ್ತಲಿದೆ: ಮಾಜಿ ಸಿಎಂ ಬೊಮ್ಮಾಯಿ

Date:

Advertisements
  • ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಆಕ್ಷೇಪ
  • ‘ತಮಗೆ ನೀಡಿರುವ ಖಾತೆ ಬದಲಾಯಿಸಲಿ ಎಂದೋ, ಹೈಕಮಾಂಡ್ ಮೆಚ್ಚಿಸಲೋʼ

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈಕಮಾಂಡ್ ಮೆಚ್ಚಿಸಲೊ” ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

“ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಅವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನಾಗಿ ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನುಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನುಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌” ಎಂದು ತಿಳಿಸಿದ್ದಾರೆ.

Advertisements

“ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಚಿವರಿಗೆ ಸೂಕ್ತ ಸಲಹೆ ನೀಡುವ ಅವಶ್ಯಕತೆ ಇದೆ” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X