ಬೆಂಗಳೂರು ಗ್ರಾಮಾಂತರ | ಬೆಂಕಿ ಅವಘಡ; ಹಸುಗಳ ಸಜೀವ ದಹನ

Date:

• ಹಸುಗಳನ್ನು ರಕ್ಷಿಸಲು ಹೋದ ವೃದ್ಧ ರೈತನಿಗೆ ಗಾಯ, ಆಸ್ಪತ್ರೆಗೆ ದಾಖಲು
• ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಕೊಟ್ಟಿಗೆಯಿಂದ ಹೊರಗೆ ಕಳಿಸಿದ್ದ ರೈತ

ಆಕಶ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ಸಜೀವವಾಗಿ ಸುಟ್ಟು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊನ್ನಾಘಟ್ಟ ಗ್ರಾಮದಲ್ಲಿ ನಡೆದಿದೆ.

ಹೊನ್ನಘಟ್ಟ ಗ್ರಾಮದ ಮುನಿಹನುಮಯ್ಯ ಎಂಬ ರೈತನಿಗೆ ಸೇರಿದ್ದ ಹಸುಗಳು ಸುಟ್ಟುಹೋಗಿವೆ. ಮುನಿಹನುಮಯ್ಯ ತಮ್ಮ ತೋಟದ ಮನೆ ಬಳಿ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು, ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದರು. ಘಟನೆ ನಡೆದ ದಿನ ರಾತ್ರಿ ಎಂದಿನಂತೆ ಹಸುಗಳಿಗೆ ಮೇವು ಹಾಕಿ ಮನೆಯಲ್ಲಿದ್ದರು. ಈ ವೇಳೆ ಏಕಾಏಕಿ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುನಿಹನುಮಯ್ಯ ಕೂಡಲೆ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಕೊಟ್ಟಿಗೆಗೆ ಒಣಗಿದ ತೆಂಗಿನ ಗರಿಗಳನ್ನು ಹಾಕಿದ್ದ ಕಾರಣ ಆ ವೇಳೆಗಾಗಲೇ ಸಂಪೂರ್ಣ ಕೊಟ್ಟಿಗೆಗೆ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಲಕ್ಷ ಬೆಲೆ ಬಾಳುವ ಎರಡು ಹಸುಗಳು ಬೆಂದು ಸ್ಥಳದಲ್ಲೆ ಮೃತಪಟ್ಟಿವೆ.

ದನದ ಕೊಟ್ಟಿಗೆಗೆ ಬೆಂಕಿ ಬೀಳುತ್ತಿದ್ದಂತೆ ಮನೆಯಲ್ಲಿದ್ದ ವೃದ್ದ ಮುನಿಹನುಮಯ್ಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ನಾಲ್ಕು ಜಾನುವಾರುಗಳನ್ನ ರಕ್ಷಿಸಿ ಹೊರಗಡೆ ಕಳಿಸಿದ್ದಾರೆ. ಉಳಿದ ಎರಡು ಹಸುಗಳನ್ನು ರಕ್ಷಿಸಲು ಹೋದ ವೇಳೆ ರೈತ ಸಹ ಬೆಂಕಿಗೆ ಸಿಲುಕಿ ಶೇ. 50 ರಷ್ಟು ಸುಟ್ಟಿದ್ದು, ಸ್ಥಳಿಯರು ರೈತನನ್ನು ರಕ್ಷಿಸಿ ಆಸ್ವತ್ರೆಗೆ ಸಾಗಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...