ಬೀದರ್‌ | ಕನ್ನಡ ಭಾಷೆ ಶ್ರೀಮಂತಿಕೆಯ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ : ಸುರೇಶ ಚನ್ನಶೆಟ್ಟಿ

Date:

Advertisements

ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.

ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. “ಈಗಾಗಲೇ ಅನೇಕ ಕನ್ನಡ ಪರ ಸಂಘ- ಸಂಸ್ಥೆಗಳು ಇವೆ. ಸಂಸ್ಥೆಗಳ ಸಂಖ್ಯೆ ಹೆಚ್ಚಿದಷ್ಟು ಕನ್ನಡ ಬೆಳವಣಿಗೆಗೆ ಅನುಕೂಲವೇ ಆಗಲಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಶ್ರೇಯಸ್ಸು ಬಸವಾದಿ ಶರಣರಿಗೆ ಸಲ್ಲುತ್ತದೆ. ಅವರು ಬೇರೆ ಬೇರೆ ರಾಜ್ಯಗಳಿಂದ ಬಂದವರಿಗೆ ಕನ್ನಡ ಕಲಿಸಿದ್ದರು. ಕನ್ನಡದಲ್ಲಿ ವಚನ ಬರೆಯಲು ಪ್ರೇರಣೆ ನೀಡಿದ್ದರು” ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, “ಸಾಹಿತ್ಯಿಕ ಚಟುವಟಿಕೆಗಳನ್ನು ಕೈಗೊಳ್ಳಲು ವಚನಾಮೃತ ಕನ್ನಡ ಸಂಘ ರಚಿಸಲಾಗಿದೆ. ಸಂಘದಿಂದ ಬರುವ ದಿನಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ” ಎಂದು ಹೇಳಿದರು.

Advertisements

ಕಲಬುರಗಿಯ ಹಿರಿಯ ಸಾಹಿತಿ ಕಾವ್ಯಶ್ರೀ ಮಹಾಗಾಂವರ್ ವಿಶೇಷ ಉಪನ್ಯಾಸ ನೀಡಿ, “ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳಿಗೆ ಸಂಬಂಧವಿದೆ. ಮಾನವೀಯ ಮೌಲ್ಯಗಳ ಜಾಗೃತಿ ಹೆಚ್ಚು ಅವಶ್ಯಕವಾಗಿದೆ.12ನೇ ಶತಮಾನದ ಶರಣರು ನೀಡಿರುವ ಶ್ರೇಷ್ಠವಾದ ವಚನ ಸಾಹಿತ್ಯವನ್ನು ಎಲ್ಲರೂ ಅಧ್ಯಯನ ಮಾಡಬೇಕು” ಎಂದು ಹೇಳಿದರು

ಎಚ್‌ಕೆಇ ಸೊಸೈಟಿ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕನ್ನಡ ಪರ ಚಟುವಟಿಕೆಗಳಿಗೆ ತಮ್ಮ ಸಹಕಾರ ಸದಾ ಇರಲಿದೆ” ಎಂದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಯುನೈಟೆಡ್ ಕಿಂಗಡಂ ಗೌರವ ಯುವ ಸಂಚಾಲಕ ಆದಿಶ್ ವಾಲಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಬಿ.ವಿ. ಭೂಮರಡ್ಡಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ, ಸಾಹಿತ್ಯ ಹಾಗೂ ಸಂಸ್ಕೃತಿ ಚಿಂತಕ ಗುರುಸಿದ್ದಪ್ಪ ಬಿರಾದಾರ ಸೇರಿದಂತೆ ಪ್ರಮುಖರಾದ ಬಸವರಾಜ ರುದನೂರು, ಶ್ರೀಕಾಂತ ಬಿರಾದಾರ, ಲೋಕೇಶ ಉಡಬಾಳೆ, ಬಸವರಾಜ ಬಿರಾದಾರ, ಆನಂದ ಜಾಧವ್, ರಾಜಕುಮಾರ ಶಂಭು, ಸಿದ್ರಾಮಪ್ಪ ಸಪಾಟೆ, ಕೆ. ಗುರುಮೂರ್ತಿ, ಗಂಗಶೆಟ್ಟಿ ಖಾನಾಪುರೆ, ಬಸವರಾಜ ಬೆಳಕುಣಿ ಸ್ವರೂಪಾರಾಣಿ, ಭಾರತಿ ವಸ್ತ್ರದ್ ಮೊದಲಾದವರು ಇದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಭೀಕರ ಹತ್ಯೆ

ಪ್ರವೀಣ ಮ್ಯೂಸಿಕ್ ಅಕಾಡೆಮಿಯವರು ನಾಡ ಗೀತೆ ಹಾಗೂ ಸಂಗೀತ ನಡೆಸಿಕೊಟ್ಟರು. ಜಯದೇವಿ ಯದಲಾಪುರೆ ನಿರೂಪಿಸಿದರು. ಪರಮೇಶ್ವರ ಬಿರಾದಾರ ಸ್ವಾಗತಿಸಿದರು. ಸಂತೋಷ ಮಂಗಳೂರೆ ವಂದಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X